ಬ್ರೇಕಿಂಗ್ ನ್ಯೂಸ್
25-04-23 05:08 pm HK News Desk ಕರ್ನಾಟಕ
ಮಂಡ್ಯ, ಎ.25: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ. ಈ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಶವಗಳನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five persons from Bengaluru, including two children, are believed to have drowned in VC canal at Doddakottagere village near Basaralu in Mandya taluk of Karnataka on April 25.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm