ಬ್ರೇಕಿಂಗ್ ನ್ಯೂಸ್
01-05-23 11:55 am Bangalore Correspondent ಕರ್ನಾಟಕ
ಬೆಂಗಳೂರು, ಮೇ.1: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಜೆಪಿ ನಡ್ಡಾ ಅವರು, ರಾಜ್ಯದ 224 ಕ್ಷೇತ್ರದ ಜನತೆ, ತಜ್ಞರ ಅಭಿಪ್ರಾಯ ಪಡೆದು ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ಬಿಜೆಪಿಯದ್ದು ಜನಪರ ಪ್ರಣಾಳಿಕೆಯಾಗಿದೆ, ಜನರಿಗೆ ಏನೆಲ್ಲಾ ಒಳ್ಳೆಯದನ್ನು ಮಾಡಲು ಸಾಧ್ಯವಿದೆ, ಅದನ್ನು ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುಧಾಕರ್, "ವಿಷಯ ತಜ್ಞರಿಂದ ಸಲಹೆಗಳನ್ನು ಪಡೆದು ಪ್ರಣಾಳಿಕೆಯನ್ನು ಸಿದ್ದಪಡಿಲಾಗಿದೆ, 900ಕ್ಕೂ ಹೆಚ್ಚಿನ ಸಲಹೆಗಳನ್ನು ನೀಡಿದ್ದಾರೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಭೆಯಲ್ಲಿ ಭಾಗವಹಿಸದ್ದರು, ಕಾಂಗ್ರೆಸ್ನವರ ರೀತಿ ನಾವು ಸುಳ್ಳು ಭರವಸೆ ನೀಡಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ" ಎಂದು ಹೇಳಿದರು.
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, "ಸುಧಾಕರ್ ನೇತೃತ್ವದಲ್ಲಿ ಒಂದು ತಂಡ ಕಳೆದ ಮೂರು ತಿಂಗಳಿನಿಂದ ಸಾಮಾನ್ಯ ಜನತೆಯಿಂದ, ಪರಿಣತರಿಂದ ಅಭಿಪ್ರಾಯಗಳನ್ನು ಪಡೆದುಕೊಂಡು ನಿಜವಾಗ ಪ್ರಜಾ ಪ್ರಣಾಳಿಕೆಯನ್ನು ರೂಪಿಸಲಾಗಿದೆ, ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ," ಎಂದರು
ಈ ಬಾರಿ ಪ್ರಣಾಳಿಕೆಯಲ್ಲಿ ಬಿಜೆಪಿ ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಮೂರು ಉಚಿತ ಅಡುಗೆ ಅನಿಲ ಸಿಲಿಂಡರ್ ನೀಡುವ ಭರವಸೆ ನೀಡಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ದಿನ ಅರ್ಧ ಲೀಟರ್ ಉಚಿತ ಹಾಲು, ತಿಂಗಳಿಗೆ 5 ಕೆಜಿ ಸಿರಿಧಾನ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ.

ಪ್ರತಿ ವಾರ್ಡ್ನಲ್ಲಿ ಅಟಲ್ ಆಹಾರ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದು, ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ತಿಂಡಿ-ಊಟ ನೀಡುವುದಾಗಿ ತಿಳಿಸಿದೆ. ಸರ್ವರಿಗೂ ಸೂರು ಯೋಜನೆಯಡಿ ಮನೆ ಇಲ್ಲದ ಎಲ್ಲರಿಗೂ ಮನೆ ಕಟ್ಟಿಕೊಡುವ ಭರವಸೆ ನೀಡಿದೆ.
ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯಡಿ ಎಸ್ಸಿ, ಎಸ್ಟಿ ಮಹಿಳೆಯರಿಗೆ 10000 ರೂಪಾಯಿ ಫಿಕ್ಸೆಡ್ ಡಿಪಾಸಿಟ್ ಮಾಡುವುದಾಗಿ ತಿಳಿಸಿದೆ. ಹಿರಿಯ ನಾಗರೀಕರಿಗೆ ಪ್ರತಿ ವರ್ಷ ಉಚಿತ ವೈದ್ಯಕೀಯ ತಪಾಸಣೆಯನ್ನು ಒದಗಿಸುವುದಾಗಿ ಹೇಳಿದೆ

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಸಚಿವ ಸುಧಾಕರ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಿದ್ದರು.
The Bharatiya Janata Party is expected to release its poll manifesto today for the May 10 Karnataka elections. The manifesto will be released by party president JP Nadda in presence of Chief Minister Basavaraj Bommai and former Chief Minister BS Yediyurappa. The party is expected to make promises for the development of various sections of the society.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm