ಬ್ರೇಕಿಂಗ್ ನ್ಯೂಸ್
02-05-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿದ್ದಾರೆಂದು ಯಡಿಯೂರಪ್ಪ ಹೇಳುತ್ತಿದ್ದಾರೆ. ಆದರೆ ಇದೇ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 2013 ರಲ್ಲಿ ದೆಹಲಿಯ ಹೋಟೆಲ್ ಒಂದರಲ್ಲಿ ಒಬ್ಬರನ್ನು ಭೇಟಿಯಾಗಿದ್ದರು. ಅವರು ಯಾರು ಎಂಬುದನ್ನು ನೆನಪಿಸಿಕೊಳ್ಳಲಿ. ಆ ಬಗ್ಗೆ ಸದ್ಯದಲ್ಲೇ ಮಾಹಿತಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಅಂದು ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಭೇಟಿಯಾದ ವ್ಯಕ್ತಿ ಯಾರು ಎಂಬುದನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ತಮ್ಮ ಗುರಿ ಮಾಡುವುದರಲ್ಲಿ ಅರ್ಥವಿಲ್ಲ. ವೀರಶೈವ- ಲಿಂಗಾಯತ ಸಮುದಾಯದ ಬೇರೆ ಮುಖಂಡರನ್ನು ತರುವುದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂತೋಷ್ ಸಂಚು ರೂಪಿಸಿದ್ದರು. ಇವರೇ ಸೇರಿ ಶೆಟ್ಟರ್, ಸವದಿಯನ್ನು ಬಿಜೆಪಿ ತೊರೆಯುವಂತೆ ಮಾಡಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದ್ದಾರೆ.

ಶೆಟ್ಟರ್ ಮತ್ತು ಸವದಿ ಕಾಂಗ್ರೆಸ್ ಸೇರಿ ಬಿಜೆಪಿ ಬೆನ್ನಿಗೆ ಚೂರಿ ಹಾಕಿದ್ದೀರಿ ಎಂದು ಆರೋಪಿಸಿರುವ ನೀವು (ಯಡಿಯೂರಪ್ಪ) 2013ರಲ್ಲಿ ಕೆಜೆಪಿ ಆರಂಭಿಸಿದಾಗ ಬಿಜೆಪಿಯ ಎದೆಗೆ ಚೂರಿ ಹಾಕಿಲ್ಲವೇ ಎಂದು ಪ್ರಶ್ನಿಸಿದರು. ಇದು ವೀರಶೈವ -ಲಿಂಗಾಯತ ಸಮುದಾಯಕ್ಕೆ ತವರು ಮನೆಯಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130-140 ಸ್ಥಾನಗಳನ್ನು ಗೆಲ್ಲಲಿದೆ ಎಂದವರು ಹೇಳಿದ್ದಾರೆ.
1990ರಲ್ಲಿ ಸಮುದಾಯದ ನಾಯಕ ವೀರೇಂದ್ರ ಪಾಟೀಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ನಿರ್ಧಾರವನ್ನು ಪಾಟೀಲ್ ಸಮರ್ಥಿಸಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಬದಲಿಸಲಾಗಿತ್ತು. ಬೇರೇನು ದುರುದ್ದೇಶ ಇರಲಿಲ್ಲ ಎಂದು ಹೇಳಿದರು. ಆದರೆ, ಯಡಿಯೂರಪ್ಪನವರು ಚೆನ್ನಾಗಿದ್ದರೂ ಬಿಜೆಪಿ ಅವರನ್ನು ಏಕೆ ಅಧಿಕಾರದಿಂದ ಕೆಳಗಿಳಿಸಿತು ಎಂದು ಪ್ರಶ್ನಿಸಿದರು.
ಶೆಟ್ಟರ್ ಮತ್ತು ಸವದಿ ಅವರನ್ನು ಸೋಲಿಸಲು ಯಡಿಯೂರಪ್ಪ ಅವರನ್ನು ನಿಯೋಜಿಸಲಾಗಿದೆ. ಯಡಿಯೂರಪ್ಪ ಅವರು ತಮ್ಮ ಇಬ್ಬರು ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಹೆದರಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ದೂರಿದ್ದಾರೆ.
M B Patil slams BJP, says Yediyurappa and Shobha Karandlaje had met someone in the hotel in 2013 in Delhi, asks who is it.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm