ಬ್ರೇಕಿಂಗ್ ನ್ಯೂಸ್
02-05-23 04:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್ಎಎಲ್ ಏರ್ಪೋರ್ಟ್ನಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಡಿಕೆ ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಸಂದರ್ಶನ ನಡೆಸುವಾಗ ಈ ಅವಘಡ ಸಂಭವಿಸಿದೆ. ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ರಣಹದ್ದು ಬಡಿದ ತಕ್ಷಣ ಹೆಲಿಕಾಪ್ಟರ್ ಗಾಜು ಪುಡಿಪುಡಿಯಾಗಿದ್ದು, ಒಂದು ಕ್ಷಣ ಡಿಕೆ ಶಿವಕುಮಾರ್ ಹಾಗೂ ವರದಿಗಾರನ ಮುಖದಲ್ಲಿ ಆತಂಕ ಆವರಿಸಿತ್ತು. ಖಾಸಗಿ ವಾಹಿನಿಯ ಛಾಯಾಗ್ರಾಹಕನಿಗೆ ಗಾಜಿನ ಚೂರು ಚುಚ್ಚಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದ ಡಿಕೆಶಿ!
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದೊಡ್ಡ ಹದ್ದು ಒಂದು ಬಂದು ಹೆಲಿಕಾಪ್ಟರ್ ಗ್ಲಾಸ್ಗೆ ಹೊಡೆಯಿತು. ಹೊಸಕೋಟೆ ಹತ್ತಿರ ತೆರಳುತ್ತಿರುವಾಗ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಹೆಲಿಕಾಪ್ಟರ್ ಗ್ಲಾಸ್ ಬ್ಲ್ಯಾಸ್ಟ್ ಆಗಿದೆ. ಪೈಲಟ್ ನಿಧಾನವಾಗಿಯೇ ಕೆಳಗೆ ಇಳಿಸಿದ್ದಾರೆ. ಸದ್ಯಕ್ಕೆ ಎಚ್ಎಎಲ್ಗೆ ವಾಪಸ್ ಆಗಿದ್ದೇನೆ. ಎಲ್ಲರೂ ಕೂಡ ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದು ಹೇಳಿದ್ದಾರೆ.
Karnataka Pradesh Congress Committee (KPCC) president DK Shivakumar suffered a bird hit to his helicopter on the way to Mulabagilu for an election rally on Tuesday. An eagle collided with the leader's chopper 's near the Jakkur airport, the Karnataka Congress said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm