ಬ್ರೇಕಿಂಗ್ ನ್ಯೂಸ್
04-05-23 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 4 : ಮೇ 6ರಂದು ಪ್ರಧಾನಿ ಮೋದಿ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪ್ರಚಾರ ಸಭೆ ನಡೆಸುವುದೆಂದು ನಿಗದಿಯಾಗಿತ್ತು. ಕೊನೆಕ್ಷಣದಲ್ಲಿ ಮೋದಿ ಚಿತ್ತಾಪುರಕ್ಕೆ ಪ್ರಚಾರ ಹೋಗುವುದನ್ನು ರದ್ದು ಪಡಿಸಲಾಗಿದೆ.
ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎನ್ನಲಾಗುತ್ತಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6 ರಂದು ಪಿಎಂ ಮೋದಿ ಭಾಗವಹಿಸಬೇಕಾಗಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಹಲವಾರು ಅಪರಾಧ ಪ್ರಕರಣಗಳಿದ್ದು, ಈ ಬಗ್ಗೆ ಪ್ರತಿಪಕ್ಷಗಳು ಕಿಡಿಕಾರುತ್ತಲೇ ಇವೆ. ಇದೀಗ ಮಣಿಕಂಠನ ಮೇಲಿದ್ದ ಕಳ್ಳತನ ಪ್ರಕರಣ ಸಾಬೀತಾಗಿದ್ದು, ಎಚ್ಚೆತ್ತುಕೊಂಡ ಬಿಜೆಪಿ ಚಿತ್ತಾಪುರದಲ್ಲಿ ಮೋದಿಯವರು ಮಣಿಕಂಠ ರಾಠೋಡ್ ಪರ ನಡೆಸಬೇಕಿದ್ದ ಪ್ರಚಾರವನ್ನು ರದ್ದುಪಡಿಸಿದೆ. ಅಂಗನವಾಡಿ ಮಕ್ಕಳ ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಪ್ರಕರಣದಲ್ಲಿ ಮಣಿಕಂಠ ರಾಠೋಡ್ ಶಿಕ್ಷೆಗೆ ಗುರಿಯಾಗಿದ್ದು, ಪ್ರಕರಣ ಸಂಬಂಧ ರಾಠೋಡ್ ಅವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಈ ಪರಿಸ್ಥಿತಿಯಲ್ಲಿ ಮಣಿಕಂಠನ ಪರ ಮೋದಿ ಪ್ರಚಾರ ನಡೆಸಿದ್ದೇ ಆದರೆ, ಬಿಜೆಪಿ ಮುಜುಗರಕ್ಕೀಡಾಗುವ ಸಾಧ್ಯತೆಗಳಿವೆ. ಏಪ್ರಿಲ್ 28 ರಂದು ಚಿತ್ತಾಪುರದಲ್ಲಿ ಮಣಿಕಂಠ ರಾಠೋಡ್ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿದ್ದರು. ಮಣಿಕಂಠನ ಮೇಲೆ ಹಲವಾರು ಪ್ರಕರಣ ಇದೆ. ಸಿಎಂ ಅವರೇ ಆತನ ಪರ ಮತ ಯಾಚನೆ ಮಾಡುವುದು ದುರಂತ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು.
It is known from sources that an allegation of theft against BJP candidate Manikant Rathod has been proven, in light of which Prime Minister Narendra Modi’s campaign in Chittapur has been cancelled. Reports said that the public meeting that PM Modi was supposed to attend in the Chittapur constituency of Kalaburagi district on May 6 has been cancelled. There are several criminal cases against Manikant Rathod, the BJP candid
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm