ಬ್ರೇಕಿಂಗ್ ನ್ಯೂಸ್
04-05-23 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 4 : ಮೇ 6ರಂದು ಪ್ರಧಾನಿ ಮೋದಿ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪ್ರಚಾರ ಸಭೆ ನಡೆಸುವುದೆಂದು ನಿಗದಿಯಾಗಿತ್ತು. ಕೊನೆಕ್ಷಣದಲ್ಲಿ ಮೋದಿ ಚಿತ್ತಾಪುರಕ್ಕೆ ಪ್ರಚಾರ ಹೋಗುವುದನ್ನು ರದ್ದು ಪಡಿಸಲಾಗಿದೆ.
ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎನ್ನಲಾಗುತ್ತಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6 ರಂದು ಪಿಎಂ ಮೋದಿ ಭಾಗವಹಿಸಬೇಕಾಗಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಹಲವಾರು ಅಪರಾಧ ಪ್ರಕರಣಗಳಿದ್ದು, ಈ ಬಗ್ಗೆ ಪ್ರತಿಪಕ್ಷಗಳು ಕಿಡಿಕಾರುತ್ತಲೇ ಇವೆ. ಇದೀಗ ಮಣಿಕಂಠನ ಮೇಲಿದ್ದ ಕಳ್ಳತನ ಪ್ರಕರಣ ಸಾಬೀತಾಗಿದ್ದು, ಎಚ್ಚೆತ್ತುಕೊಂಡ ಬಿಜೆಪಿ ಚಿತ್ತಾಪುರದಲ್ಲಿ ಮೋದಿಯವರು ಮಣಿಕಂಠ ರಾಠೋಡ್ ಪರ ನಡೆಸಬೇಕಿದ್ದ ಪ್ರಚಾರವನ್ನು ರದ್ದುಪಡಿಸಿದೆ. ಅಂಗನವಾಡಿ ಮಕ್ಕಳ ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಪ್ರಕರಣದಲ್ಲಿ ಮಣಿಕಂಠ ರಾಠೋಡ್ ಶಿಕ್ಷೆಗೆ ಗುರಿಯಾಗಿದ್ದು, ಪ್ರಕರಣ ಸಂಬಂಧ ರಾಠೋಡ್ ಅವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಈ ಪರಿಸ್ಥಿತಿಯಲ್ಲಿ ಮಣಿಕಂಠನ ಪರ ಮೋದಿ ಪ್ರಚಾರ ನಡೆಸಿದ್ದೇ ಆದರೆ, ಬಿಜೆಪಿ ಮುಜುಗರಕ್ಕೀಡಾಗುವ ಸಾಧ್ಯತೆಗಳಿವೆ. ಏಪ್ರಿಲ್ 28 ರಂದು ಚಿತ್ತಾಪುರದಲ್ಲಿ ಮಣಿಕಂಠ ರಾಠೋಡ್ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿದ್ದರು. ಮಣಿಕಂಠನ ಮೇಲೆ ಹಲವಾರು ಪ್ರಕರಣ ಇದೆ. ಸಿಎಂ ಅವರೇ ಆತನ ಪರ ಮತ ಯಾಚನೆ ಮಾಡುವುದು ದುರಂತ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು.
It is known from sources that an allegation of theft against BJP candidate Manikant Rathod has been proven, in light of which Prime Minister Narendra Modi’s campaign in Chittapur has been cancelled. Reports said that the public meeting that PM Modi was supposed to attend in the Chittapur constituency of Kalaburagi district on May 6 has been cancelled. There are several criminal cases against Manikant Rathod, the BJP candid
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm