ಬ್ರೇಕಿಂಗ್ ನ್ಯೂಸ್
07-05-23 09:44 pm HK News Desk ಕರ್ನಾಟಕ
ಮೈಸೂರು, ಮೇ 7: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ(67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.
ಬಲರಾಮ ಅನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಬಲರಾಮ ಎಲ್ಲರ ಕಣ್ಮಣಿಯಾಗಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಬಲರಾಮ ಇತ್ತೀಚೆಗೆ ತೀವ್ರ ಅಸ್ವಸ್ಥಗೊಂಡಿತ್ತು.
ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಾ ಬಂದಿತ್ತು. ಬಲರಾಮನ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು ಕುಡಿಯಲು ಆಗದೇ ಅಸ್ವಸ್ಥಗೊಂಡಿತ್ತು. ವೈದ್ಯರು ನೀಡುತ್ತಿದ್ಧ ಚಿಕಿತ್ಸೆಗೆ ಸ್ಪಂದಿಸದೇ ಬಲರಾಮ ಭಾನುವಾರ ಕೊನೆಯುಸಿರೆಳೆಯುತು.
ಎಷ್ಟೇ ಪ್ರಯತ್ನಪಟ್ಟರು ಸಹ ಚಿಕಿತ್ಸೆಗೆ ಸ್ಪಂದಿಸದ್ದರಿಂದ ಬಲರಾಮನನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಬಲರಾಮನ ಅಗಲುವಿಕೆಯಿಂದ ಭೀಮನಕಟ್ಟೆ ಆನೆ ಶಿಬಿರದ ಅಧಿಕಾರಿಗಳು ಮತ್ತು ಸಿಬ್ಬಂದಿ ತೀವ್ರ ದುಃಖತಪ್ತರಾಗಿದ್ದಾರೆ. ಇದು ಟಿಬಿ ಇರಬಹುದೆಂದು ಶಂಕಿಸಲಾಗಿದ್ದರೂ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಗುಂಡು ಹೊಡೆದಿದ್ದ ಜಮೀನು ಮಾಲೀಕ
ಬಲರಾಮ ಆನೆಗೆ ವ್ಯಕ್ತಿಯೊಬ್ಬ ಗುಂಡು ಹೊಡೆದ ಪ್ರಸಂಗ ಡಿಸೆಂಬರ್ 22ರಂದು ನಡೆದಿತ್ತು. ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪದ ಜಮೀನೊಂದಕ್ಕೆ ಬಲರಾಮ ಹೋಗಿದ್ದ. ಇದರಿಂದ ಕೋಪೋದ್ರಿಕ್ತನಾದ ಆ ಜಮೀನಿನ ಮಾಲೀಕ ಸುರೇಶ್ ಎಂಬಾತ ಮನಸೋ ಇಚ್ಛೆ ಬಲರಾಮನಿಗೆ ಗುಂಡು ಹಾರಿಸಿದ್ದ.
ಈ ವೇಳೆ ಗುಂಡು ಆನೆಯ ತೊಡೆ, ಕಾಲು ಸೇರಿದಂತೆ ದೇಹದ ಅರ್ಧ ಭಾಗಕ್ಕೆ ಹೊಕ್ಕಿ ಬಲರಾಮನಿಗೆ ತೀವ್ರ ಘಾಸಿಗೊಳಿಸಿತ್ತು. ವಿಷಯ ತಿಳಿಯುತ್ತಿದ್ದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶು ವೈದ್ಯಾಧಿಕಾರಿ ಡಾ. ರಮೇಶ್ ಅವರು ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡಿದ್ದರು. ಆದಾದ ಬಳಿಕ ಬಲರಾಮ ಆನೆ ಚೇತರಿಸಿಕೊಂಡಿತ್ತು. ಗುಂಡು ಹಾರಿಸಿದ್ದ ಆರೋಪಿ ಸುರೇಶ್ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ಆತನಿಂದ ಒಂಟಿ ನಳಿಕೆಯ ಕೋವಿ ಹಾಗೂ ಕಾಡತೂಸುಗಳನ್ನು ವಶಕ್ಕೆ ಪಡೆಯಲಾಗಿತ್ತು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
Majestic in appearance and calm in disposition were the hallmarks of elephant Balarama of Mysuru Dasara fame, who passed away on Sunday, May 7, after a prolonged illness. He was 67 years and was battling what is suspected to be tuberculosis and died at around 4.30 p.m. at Bhimanakatte elephant camp in Hunsur range.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm