ಬ್ರೇಕಿಂಗ್ ನ್ಯೂಸ್
11-05-23 05:27 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಮಾಡುವ ಪರಿಸ್ಥಿತಿ ಬರುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗುವುದಿಲ್ಲ, ಬದಲಾಗಿ ಬಿಜೆಪಿಗೆ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತಗಟ್ಟೆ ಸಮೀಕ್ಷೆ ಸುಳ್ಳಾಗುತ್ತದೆ ;
ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯದ ಜನ ಸುಳ್ಳು ಮಾಡುತ್ತಾರೆ ಎಂದಿದ್ದೆ. ಇದೀಗ ನಮ್ಮ ಕಾರ್ಯಕರ್ತರು ನೀಡಿದ ಬೂತ್ ಮಟ್ಟದ ವರದಿ ಪ್ರಕಾರ ಎಕ್ಸಿಟ್ ಪೋಲ್ ಸುಳ್ಳಾಗುತ್ತದೆ ಎಂದರು.

ನಾವು ಈ ಬಾರಿ ಬಿಜೆಪಿ 120 ಸೀಟ್ ಕ್ರಾಸ್ ಮಾಡುತ್ತೇವೆ ಎಂಬ ವಿಶ್ವಾಸ ಇದೆ ಎಂದ ಅವರು, ಹಳೆ ಮೈಸೂರು ಭಾಗದಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ಯಡಿಯೂರಪ್ಪ ಅವರು 120 ದಾಟುತ್ತೆ ಎಂದಿದ್ದಾರೆ. ಅವರ ವರದಿ ಸುಳ್ಳಾಗಲ್ಲ ಎಂದರು.
ಈ ಬಾರಿ ಚುನಾವಣೆಯಲ್ಲಿ ಕರ್ನಾಟಕ 72.67 % ಮತ ಚಲಾಯಿಸಿದ್ದಾರೆ. ಕೆಲವು ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಆಗಿದೆ. ರಾಜ್ಯದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
‘ಈ ಬಾರಿ ನಮ್ಮ ಕಾರ್ಯಕರ್ತ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇನ್ನು ತಾವು ಮುಖ್ಯಮಂತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ‘ ಸಿಎಂ ಸ್ಥಾನದ ವಿಚಾರ ಬಂದಾಗ ನಾನು ರಾಜ್ಯಕ್ಕೆ ಬರುವ ಪ್ರಶ್ನೆ ಇಲ್ಲ. ನನಗೆ ಮೋದಿ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಾನು ಅಲ್ಲೇ ಖುಷಿಯಾಗಿ ಇದ್ದೇನೆ. ಮತಗಟ್ಟೆ ಸಮೀಕ್ಷೆ ಸುಳ್ಳಾಗುತ್ತದೆ. ನಾವು ಬಹುಮತದ ಸರ್ಕಾರ ಮಾಡುವ ವಿಶ್ವಾಸ ಇದ್ದು, ಬೂತ್ ಮಟ್ಟದ ಕಾರ್ಯಕರ್ತರ ವರದಿ ಪ್ರಕಾರ 120 ಕ್ಕೂ ಹೆಚ್ಚು ಸೀಟುಗಳಲ್ಲಿ ಮುಂದೆ ಇದ್ದೇವೆ. ಪ್ರಧಾನಿ ಮೋದಿ ರೋಡ್ ಶೋ ಮತದಾರರ ಮೇಲೆ ಪರಿಣಾಮ ಆಗಿದೆ ಎಂದಿದ್ದಾರೆ.
ಇಂಡಿಯಾ ಟಿವಿ-ಸಿಎನ್ಎಕ್ಸ್ ಸಹ ಕಾಂಗ್ರೆಸ್ 110 ರಿಂದ 120 ಸ್ಥಾನಗಳ ಮೂಲಕ ಸ್ಪಷ್ಟ ಬಹುಮತ ಪಡೆಯಲಿದೆ. ಜೆಡಿಎಸ್ 20- 24 ಸ್ಥಾನ ಪಡೆಯಲಿದೆ ಎಂದಿದೆ. ಇಂಡಿಯಾ ಟುಡೆ-ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 122-140 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟ ಬಹುಮತ ಪಡೆಯಲಿದೆ. ಬಿಜೆಪಿ 62-80 ಸ್ಥಾನಕ್ಕೆ ಸೀಮಿತವಾಗಲಿದೆ. ಜೆಡಿಎಸ್ 20-25 ಕ್ಷೇತ್ರಗಳಲ್ಲಿ ಗೆಲ್ಲಿದೆ. ಇತರೆ ಎಲ್ಲಾಸಮೀಕ್ಷೆಗಳು ಫಲಿತಾಂಶವನ್ನು ಬಹುತೇಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಂಚಿದ್ದು, ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಮತಗಟ್ಟೆ ಸಮೀಕ್ಷೆಗಳು ನುಡಿದಿರುವ ಭವಿಷ್ಯವು ಮೇ 13 ರಂದು ಪ್ರಕಟವಾಗಲಿರುವ ಫಲಿತಾಂಶದತ್ತ ಕುತೂಹಲವನ್ನು ಮತ್ತಷ್ಟು ಹಚ್ಚಿಸಿದೆ.
Shobha karandlaje says BJP will bag major victory in Karnataka, dont trust in Exit poll, one of our karyakarta will be next CM she added speaking at the press meet held in Bangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm