ಬ್ರೇಕಿಂಗ್ ನ್ಯೂಸ್
13-05-23 12:58 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸೋಲಿನ ಕಹಿ ಅನುಭವಿಸಿದ್ದಾರೆ. 2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಎದುರು ಸೋಲು ಕಂಡಿದ್ದ ಕಾಂಗ್ರೆಸ್ನ ಡಿಜಿ ಶಾಂತನಗೌಡ ಅವರು ಈ ಬಾರಿ ಸೇಡು ತೀರಿಸಿಕೊಂಡಿದ್ದಾರೆ.
ಅಂಚೆ ಮತ ಎಣಿಕೆ ಸಂದರ್ಭದಲ್ಲಿಯೇ ಹಿನ್ನಡೆ ಅನುಭವಿಸಿದ ರೇಣುಕಾಚಾರ್ಯ ಅವರು ಮತ್ತೆ ಚೇತರಿಸಿಕೊಳ್ಳುವುದು ಸಾಧ್ಯವಾಗಲಿಲ್ಲ. ಇವಿಎಂ ಮತಗಳ ಎಣಿಕೆಯಲ್ಲಿಯೂ ಶಾಂತನಗೌಡ ಅವರು ಗಮನಾರ್ಹ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 14 ಸಾವಿರ ಮತಗಳ ಅಂತರದಿಂದ ಶಾಂತನಗೌಡ ಮುನ್ನಡೆ ಪಡೆದಿದ್ದಾರೆ.
ಇವಿಎಂ ಮತಗಳ ಆರಂಭಿಕ ಸುತ್ತಿನ ಎಣಿಕೆಯಲ್ಲಿ ಶಾಂತನ ಗೌಡ ಅವರು 5185 ಮತಗಳನ್ನು ಪಡೆದಿದ್ದರೆ, ರೇಣುಕಾಚಾರ್ಯ ಅವರಿಗೆ 3713 ಮತಗಳು ಬಂದಿದ್ದವು.
2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಅವರು 80,624 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಆಗ ಶಾಂತನಗೌಡ ಅವರಿಗೆ 76,391 ಮತಗಳು ದೊರಕಿದ್ದವು. 4233 ಮತಗಳ ಅಂತರದಿಂದ ಶಾಂತನಗೌಡ ಸೋಲು ಅನುಭವಿಸಿದ್ದರು. 2013ರ ಚುನಾವಣೆಯಲ್ಲಿ ಶಾಂತನಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆಗ ಹೊನ್ನಾಳಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಎಂಪಿ ರೇಣುಕಾಚಾರ್ಯ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಹೊರಗೆ ಬಂದಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದ್ದರು. ಅವರ ಜತೆ ಕೆಜೆಪಿ ಸೇರ್ಪಡೆಯಾಗಿದ್ದ ರೇಣುಕಾಚಾರ್ಯ, ಈ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರು.
Honnali Election Result 2023 LIVE, M P Renukacharya defeated against D G Shantana Gowda.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm