ಬ್ರೇಕಿಂಗ್ ನ್ಯೂಸ್
15-05-23 02:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಬಹುತೇಕ ಅಂತಿಮ ಮುದ್ರೆ ಹಾಕಲು ಹೈಕಮಾಂಡ್ ಮುಂದಾಗಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಮನವೊಲಿಸಿದ್ದು, ಐದು ವರ್ಷಗಳ ಮುಖ್ಯಮಂತ್ರಿ ಹುದ್ದೆಯನ್ನು ಎರಡು ಅವಧಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲ ಎರಡು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ.
ಎರಡು ವರ್ಷಗಳ ನಂತರ ಡಿಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಆದರೆ ಮೊದಲ ಅವಧಿಯಲ್ಲಿ ಡಿಕೆಶಿ ತಾನೊಬ್ಬನೇ ಉಪ ಮುಖ್ಯಮಂತ್ರಿ ಆಗಬೇಕು, ಜೊತೆಗೆ ಗೃಹ ಸಚಿವ ಸ್ಥಾನ ನೀಡಬೇಕೆಂದು ಶರತ್ತು ಹಾಕಿದ್ದಾರೆ ಎನ್ನಲಾಗುತ್ತಿದೆ. ಶಾಸಕಾಂಗ ಸಭೆಯಲ್ಲಿ ಬಹುತೇಕ ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಒಲವು ತೋರಿದ್ದರು.
ರಾಜ್ಯದಲ್ಲಿ ಪ್ರಬಲವಾಗಿರುವ ಕುರುಬ ಸಮುದಾಯಕ್ಕೆ ಸೇರಿರುವ ಸಿದ್ದರಾಮಯ್ಯ ಅವರನ್ನು ಒಂದು ಅವಧಿಗೆ ಮುಖ್ಯಮಂತ್ರಿಯಾಗಿಸಿ ನಿವೃತ್ತಿಯಾಗಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಎಐಸಿಸಿ ವೀಕ್ಷಕರಾಗಿ ಬಂದಿರುವ ಮಹಾರಾಷ್ಟ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ, ಜಿತೇಂದರ್ ಸಿಂಗ್, ದೀಪಕ್ ಬಬರಿಯಾ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರಿಗೆ ವರದಿ ನೀಡಿದ್ದಾರೆ.
ಎಐಸಿಸಿ ಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಣದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಮತ್ತಿತರರು ಚರ್ಚೆ ನಡೆಸಿ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ.
Siddaramaiah presented a power sharing formula and said he wanted to be the chief minister for two yeara, DK Shivakumar agrees says sources.The party high command is facing a dilemma on how to accomodate Siddaramaiah if DK Shivakumar is chosen as the Congress Legislature Party (CLP) leader, sources said.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm