ಬ್ರೇಕಿಂಗ್ ನ್ಯೂಸ್
20-05-23 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ಕರ್ನಾಟಕದ 16ನೇ ವಿಧಾನಸಭೆಯ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲಕ್ಷಾಂತರ ಜನ ಅಭಿಮಾನಿಗಳ ಕರತಾಡನದ ಮಧ್ಯೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯದ 9ನೇ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದರು.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಳಿಕ ಸಚಿವರಾಗಿ ಬಬಲೇಶ್ವರ ಕ್ಷೇತ್ರದ ಶಾಸಕ ಎಂಬಿ ಪಾಟೀಲ್, ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ, ಕೆಜೆ ಜಾರ್ಜ್, ಬಿಟಿಎಂ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ, ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ. ಪರಮೇಶ್ವರ್, ದೇವನಹಳ್ಳಿ ಕ್ಷೇತ್ರದ ಕೆ.ಎಚ್ ಮುನಿಯಪ್ಪ ಹಾಗೂ ಚಾಮರಾಜಪೇಟೆ ಕ್ಷೇತ್ರದ ಜಮೀರ್ ಅಹಮದ್ ಖಾನ್ ಅವರು ಪ್ರಮಾಣವಚನ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಬಿಹಾರ ಸಿಎಂ ನಿತಿಶ್ ಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೂಪೇಶ್ ಬಘೇಲಾ, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ತೇಜಸ್ವಿ ಯಾದವ್, ನಟ ಕಮಲ ಹಾಸನ್, ನಟ ಶಿವರಾಜ್ ಕುಮಾರ್ ಇತ್ತಿತರ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮಾತನಾಡಿ, ಕಾಂಗ್ರೆಸ್ಸಿನ ವಿಜಯದ ನಂತರ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂದು ಅನೇಕ ವಿಷಯಗಳನ್ನು ಬರೆಯಲಾಗಿದೆ, ವಿಭಿನ್ನ ವಿಶ್ಲೇಷಣೆಗಳನ್ನು ಮಾಡಲಾಗಿದೆ. ಆದರೆ ನಾವು ಬಡವರು, ದಲಿತರು ಮತ್ತು ಆದಿವಾಸಿಗಳು, ಹಿಂದುಳಿದವರ ಜೊತೆ ನಿಂತಿದ್ದರಿಂದ ಕಾಂಗ್ರೆಸ್ ಗೆದ್ದಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಾವು ಸತ್ಯವನ್ನು ಹೊಂದಿದ್ದೇವೆ. ಬಿಜೆಪಿ ಬಳಿ ಹಣ, ಪೋಲೀಸ್ ಎಲ್ಲವೂ ಇತ್ತು. ಆದರೆ ಕರ್ನಾಟಕದ ಜನರು ತಮ್ಮ ಎಲ್ಲಾ ಶಕ್ತಿಯನ್ನು ಸೋಲಿಸಿದ್ದಾರೆ ಎಂದು ಹೇಳಿದರು.



ನಾವು ನಿಮಗೆ 5 ಭರವಸೆಗಳನ್ನು ನೀಡಿದ್ದೇವೆ. ನಾವು ಸುಳ್ಳು ಭರವಸೆ ನೀಡುವುದಿಲ್ಲ ಎಂದು ಹೇಳಿದ್ದೆ. ನಾವು ಹೇಳಿದ್ದನ್ನು ಮಾಡುತ್ತೇವೆ. 1-2 ಗಂಟೆಗಳಲ್ಲಿ ಕರ್ನಾಟಕ ಸರ್ಕಾರದ ಮೊದಲ ಸಂಪುಟ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ 5 ಭರವಸೆಗಳು ಕಾನೂನಾಗಲಿವೆ. ನಾವು ನಿಮಗೆ ಸ್ವಚ್ಛ, ಭ್ರಷ್ಟರಹಿತ ಸರ್ಕಾರವನ್ನು ನೀಡುತ್ತೇವೆ ಎಂದು ಹೊಸದಾಗಿ ಚುನಾಯಿತ ಕರ್ನಾಟಕ ಸರ್ಕಾರದ ಪ್ರಮಾಣವಚನ ಸಮಾರಂಭದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
Congress veteran Siddharamaiah on Sunday was sworn in as the Chief Minister of Karnataka for the second term, along with Karnataka Congress president DK Shivakumar as his deputy. Governor Thaawarchand Gehlot administered the oath of office at Bengaluru's Kanteerava Stadium.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm