ಬ್ರೇಕಿಂಗ್ ನ್ಯೂಸ್
22-05-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮೇ 22; 'ಏನೇ ಆದ್ರು ನನ್ನ ಫೇವರಿಟ್ RCB ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ' ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಆರ್ಸಿಬಿ ಪ್ಲೇ ಆಫ್ಗೆ ಹೋಗಲು ಸಾಧ್ಯವಾಗದಿರುವುದಕ್ಕೆ ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಅವರು ಧೈರ್ಯ ತುಂಬಿದ್ದಾರೆ.
ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಡಿ. ಕೆ. ಶಿವಕುಮಾರ್ ಪುತ್ರಿ ಮತ್ತು ಪುತ್ರನ ಜೊತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಣೆ ಮಾಡಿದರು. ಈ ಕುರಿತು ಫೇಸ್ಬುಕ್ ಪುಟದಲ್ಲಿ ಅವರು ಪೋಸ್ಟ್ ಹಾಕಿದ್ದಾರೆ.
'ನಮ್ಮ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ RCB. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ' ಎಂದು ಡಿಸಿಎಂ ಡಿ. ಕೆ.
ಸಿದ್ದರಾಮಯ್ಯಗೂ ಆರ್ಸಿಬಿ ನೆಚ್ಚಿನ ತಂಡ;
ಡಿ. ಕೆ. ಶಿವಕುಮಾರ್ ಮಾತ್ರವಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಆರ್ಸಿಬಿ ನೆಚ್ಚಿನ ತಂಡ. ಏಪ್ರಿಲ್ನಲ್ಲಿ ಚುನಾವಣೆ ಪ್ರಚಾರದ ನಡುವೆಯೂ ಅವರು ಮ್ಯಾಚ್ ನೋಡಲು ತೆರಳಿದ್ದರು. ಅಲ್ಲದೇ 'ಕ್ರಿಕೆಟ್ ನನ್ನ ಇಷ್ಟದ ಆಟ, ಆರ್ಸಿಬಿ ನನ್ನ ಹೆಮ್ಮೆಯ ತಂಡ' ಎಂದು ಟ್ವೀಟ್ ಮಾಡಿದ್ದರು.
'ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್. ಸಿ. ಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್ಸಿಬಿಗೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಆರ್ಸಿಬಿ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದರು.
Karnataka DCM Dk Shivamumar and family visits stadium to watch RCB match, says RCB will win for sure.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm