ಬ್ರೇಕಿಂಗ್ ನ್ಯೂಸ್
23-05-23 12:04 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23: ಕಾಂಗ್ರೆಸ್ ನಾಯಕ ಯುಟಿ ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲು ನಿರ್ಧರಿಸಲಾಗಿದೆ. ಯು.ಟಿ.ಖಾದರ್ ಅವರು ಐದನೇ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅವರು ಆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ತಡರಾತ್ರಿ ಯು.ಟಿ ಖಾದರ್ ಅವರನ್ನು ಕರೆಯಿಸಿಕೊಂಡು ಸ್ಪೀಕರ್ ಸ್ಥಾನವನ್ನು ಅಲಂಕರಿಸುವಂತೆ ಅವರ ಮನವೊಲಿಸುವಲ್ಲಿ ಎಐಸಿಸಿ ನಾಯಕರು ಯಶಸ್ವಿಯಾಗಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಕೈ ಹಿರಿಯ ನಾಯಕರು ಸ್ಪೀಕರ್ ಸ್ಥಾನವನ್ನು ಅಲಂಕರಿಸಲು ಹಿಂದೇಟು ಹಾಕಿದ್ದರು. ಇದು ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಆರ್.ವಿ ದೇಶಪಾಂಡೆ, ಹೆಚ್.ಕೆ ಪಾಟೀಲ್ ಅವರು ಸಭಾಪತಿ ಸ್ಥಾನವನ್ನು ನಿರಾಕರಣೆ ಮಾಡಿದ ನಂತರ ಟಿ.ಬಿ ಜಯಚಂದ್ರ ಅವರನ್ನು ಸಂಪರ್ಕಿಸಲಾಯಿತು. ಆದ್ರೆ ಅವರು ತಮ್ಮ ಮೊಬೈಲ್ನ್ನು ಸ್ವಿಚ್ ಆಪ್ ಮಾಡಿಕೊಂಡಿದ್ದರು.

ಇದರಂದಾಗಿ ಸ್ಪೀಕರ್ ಆಯ್ಕೆ ಕೈ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತು. ನಂತರ ಎಐಸಿಸಿ ನಾಯಕರ ಅಖಾಡಕ್ಕೆ ಇಳಿದು ತಡರಾತ್ರಿ ಯು.ಟಿ ಖಾದರ್ ನ್ನ ಕರೆಸಿಕೊಂಡು ಚರ್ಚೆ ನಡೆಸಿದರು. ಖಾಸಗಿ ಹೋಟೆಲ್ಗೆ ಖಾದರ್ ಅವರನ್ನು ಕರೆಸಿಕೊಂಡು ಮನವೊಲಿಕೆ ಮುಂದಾಗಿದ್ದರು. ಸ್ಪೀಕರ್ ಸ್ಥಾನ ಅಲಂಕರಿಸಲು ಹಿರಿಯ ನಾಯಕರು ನಿರಾಕರಿಸಿದ ಕಾರಣ ರಾತ್ರಿಯೇ ಬೆಂಗಳೂರಿಗೆ ಎಐಸಿಸಿ ನಾಯಕರು ಧಾವಿಸಿದ್ದರು.
ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ಉಸ್ತುವಾರಿ ಸುರ್ಜೇವಾಲಾ ಅವರು ಹಿರಿಯ ನಾಯಕರ ಜೊತೆ ಚರ್ಚೆ ನಡೆಸಿದದರು. ಯಾರೂ ಒಪ್ಪಿಕೊಳ್ಳದ ಹಿನ್ನೆಲೆ ಕೊನೆಗೆ ಯು.ಟಿ ಖಾದರ್ ನ್ನ ಕರೆಸಿಕೊಂಡು ಸಮಾಲೋಚನೆ ಮಾಡಲಾಯಿತು. ಅಲ್ಲದೆ ಎರಡು ವರ್ಷಗಳ ನಂತರ ಸಚಿವ ಸ್ಥಾನದ ನೀಡುವುದಾಗಿ ಖಾದರ್ ಅವರಿಗೆ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಎಐಸಿಸಿ ನಾಯಕರ ಭರವಸೆಯಿಂದಾಗಿ ಸ್ಪೀಕರ್ ಸ್ಥಾನಕ್ಕೆ ಒಲ್ಲದ ಮನಸ್ಸಿನಿಂದಲೇ ಖಾದರ್ ಅವರು ಒಪ್ಪಿಕೊಂಡಿದ್ದಾರೆ.
Former Minister and five-time MLA U.T. Khader is the choice of the Congress for the post of Speaker of Karnataka Legislative Assembly. His candidature will be formalised during the Congress Legislature’s Party meeting scheduled on Wednesday (May 24). The ruling party’s nominee is, generally, unanimously elected as the Speaker.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm