ಬ್ರೇಕಿಂಗ್ ನ್ಯೂಸ್
25-05-23 12:29 pm HK News Desk ಕರ್ನಾಟಕ
ಮೈಸೂರು, ಮೇ. 25: ಮೂರು ತಿಂಗಳ ಹಿಂದೆ ಅಂದರೆ ಕಳೆದ ಫೆಬ್ರವರಿಯಲ್ಲಿ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ.
ಫೆಬ್ರವರಿ 15 ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ್ , ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನರನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ಅವರು ಅಶ್ವತ್ಥ ನಾರಾಯಣ್ ಹೇಳಿಕೆ ನೀಡಿದ ದಿನವೇ ದೂರು ನೀಡಿದ್ದರು. ಆದರೆ, ಆ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆಗ ಬಿಜೆಪಿ ಸರ್ಕಾರವಿತ್ತು. ಬುಧವಾರ ಮತ್ತೆ ಠಾಣೆಗೆ ತೆರಳಿ ಮತ್ತೆ ದೂರು ಸಲ್ಲಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿದ್ದು, ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಅಶ್ವತ್ಥ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಅವರನ್ನು ತಕ್ಷಣ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿಯೂ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಈಗ ದೂರು ದಾಖಲಿಸಿಕೊಂಡಿರುವ ಪೊಲೀಸರು ಮಾಜಿ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 153 (ಗಲಬೆ ಉಂಟು ಮಾಡಲು ಪ್ರಚೋದಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯದ ಸಾತನೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅಶ್ವಥ್ ನಾರಾಯಣ್ , 'ಟಿಪ್ಪುವಿನ ಮಗ ಸಿದ್ದರಾಮಯ್ಯ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಅಥವಾ ಸಾವರ್ಕರ್..? ನಾವು ಟಿಪ್ಪು ಸುಲ್ತಾನ್ ಅನ್ನು ಎಲ್ಲಿಗೆ ಕಳುಹಿಸಬೇಕು..? ಉರಿಗೌಡ ಮತ್ತು ನಂಜೇಗೌಡರು ಏನು ಮಾಡಿದರು..? ಅದೇ ರೀತಿಯಲ್ಲಿ ಅವರನ್ನು ಹೊಡೆದು ಹಾಕಬೇಕು' ಎಂದಿದ್ದರು.

ಇದಕ್ಕೆಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, 'ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಟಿಪ್ಪುವನ್ನು ಕೊಂದ ರೀತಿಯಲ್ಲಿಯೇ ನನ್ನನ್ನೂ ಸಾಯಿಸಿ ಎಂದು ಮನವಿ ಮಾಡಿದ್ದಾರೆ. ಅಶ್ವಥ್ ನಾರಾಯಣ್, ಜನರನ್ನು ಪ್ರಚೋದಿಸಲು ಏಕೆ ಪ್ರಯತ್ನಿಸುತ್ತಿದ್ದೀರಿ? ನೀವೇ ಬಂದೂಕು ತೆಗೆದುಕೊಳ್ಳಿ. ಈ ಬಗ್ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೌನವಾಗಿದ್ದಾರೆ. ಅಶ್ವಥ್ ನಾರಾಯಣ ಹೇಳಿಕೆಗೆ ಅವರ ಸಮ್ಮತಿ ಇದೆ ಎಂಬುದನ್ನು ಇದು ತೋರಿಸುತ್ತದೆ' ಎಂದು ಹೇಳಿದ್ದರು.
FIR Registered Against Former BJP Minister Ashwath Narayan In Mysuru For His Remarks on SiddaramaiahBreaking News | FIR registered against former BJP Minister Ashwath Narayan in Mysuru over his alleged "finish off.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm