ಬ್ರೇಕಿಂಗ್ ನ್ಯೂಸ್
25-05-23 07:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಯಶಸ್ಸಿನ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ‘ಕೆರಾಡಿ ಸ್ಟುಡಿಯೋಸ್' ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾಗಿ ತಿಳಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಇದೀಗ ಹೊಸ ಘೋಷಣೆ ಮಾಡಿದ್ದಾರೆ. ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ (Keradi Studios) ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ರಿಷಬ್ ಪತ್ರ ಬರೆದಿದ್ದಾರೆ.
ಅಂದ ಹಾಗೆ ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಕೋರಿದ್ದಾರೆ.
ರಿಷಬ್ ಶೆಟ್ಟಿ ಬಹುಮುಖ ಪ್ರತಿಭೆಯಾಗಿ ಸಿನಿಮಾ ಕ್ಷೇತ್ರದಲ್ಲಿ ಯಶಸ್ಸು ಕಂಡಿದ್ದಾರೆ. ಈಗ ಅವರು ಹೊಸ ಸಾಹಸಕ್ಕೆ ಮುಂದಾಗಿದ್ದು ಸಿನಿಮಾಗಳ ಪ್ರಚಾರಕ್ಕೆಂದು ಹೊಸ ವೇದಿಕೆ ಕಟ್ಟಿದ್ದಾರೆ. ನೆಚ್ಚಿನ ನಟ ರಿಷಬ್ ಹೊಸ ಕೆಲಸಕ್ಕೆ ಅಭಿಮಾನಿಗಳು ಶುಭಕೋರಿದ್ದಾರೆ.
ಹೊಸ ಹೆಜ್ಜೆ, ಹೊಸ ಕನಸು!#kerady #keradystudios #rishabshettyfilms #moviemarketing #kannadafilmindustry pic.twitter.com/H67tiPQCDE
— Rishab Shetty (@shetty_rishab) May 25, 2023
D Vine star Rishab Shetty has started a new endeavor after the super success of the movie 'Kantara'. Rishabh Shetty has shared about his new step on social media. Rishabh Shetty started a new business in the name of 'Keradi'.Rishabh Shetty, who is known as an actor, director and producer, has now made a new announcement on social media. A film's success requires not only its production but also its promotion.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm