ಬ್ರೇಕಿಂಗ್ ನ್ಯೂಸ್
25-05-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಮೊದಲ ಎಫ್ಐಆರ್ ಬೆಂಗಳೂರಿನಲ್ಲಿ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. ಎರಡರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವ ಸಣ್ಣ ರೈತರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಲಾಗುತ್ತದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ನಡೆಯುವ ಅಕ್ರಮ ತಡೆಯಲು ತನಿಖೆಗೆ ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣ ಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಎಂದು ತನಿಖೆ ನಡೆಸಿದ್ದ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ 2021ರ ನಡುವೆ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಯ ತನಿಖೆಯಲ್ಲಿ ತಿಳಿದುಬಂದಿತ್ತು. ಗೋಲ್ಮಾಲ್ನಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ನಾರಾಯಣ ಸ್ವಾಮಿ ತಿಳಿಸಿದ್ದರು.
Karnataka Ganga Kalyana Scheme 2023 corruption scam, FIR registered at Vidhana Soudha police station by Congress.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm