ಬ್ರೇಕಿಂಗ್ ನ್ಯೂಸ್
25-05-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಮೊದಲ ಎಫ್ಐಆರ್ ಬೆಂಗಳೂರಿನಲ್ಲಿ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. ಎರಡರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವ ಸಣ್ಣ ರೈತರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಲಾಗುತ್ತದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ನಡೆಯುವ ಅಕ್ರಮ ತಡೆಯಲು ತನಿಖೆಗೆ ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣ ಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಎಂದು ತನಿಖೆ ನಡೆಸಿದ್ದ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ 2021ರ ನಡುವೆ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಯ ತನಿಖೆಯಲ್ಲಿ ತಿಳಿದುಬಂದಿತ್ತು. ಗೋಲ್ಮಾಲ್ನಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ನಾರಾಯಣ ಸ್ವಾಮಿ ತಿಳಿಸಿದ್ದರು.
Karnataka Ganga Kalyana Scheme 2023 corruption scam, FIR registered at Vidhana Soudha police station by Congress.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm