ಬ್ರೇಕಿಂಗ್ ನ್ಯೂಸ್
26-05-23 01:28 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26 : ಚುನಾವಣೆಗೆ ಮುಂಚೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಂಟಿ ಸಹಿಯುಳ್ಳ ಗ್ಯಾರಂಟಿ ಕಾರ್ಡ್ಗಳನ್ನು ರಾಜ್ಯದ ಪ್ರತಿ ಮನೆಗೆ ವಿತರಿಸಿ, ಕಾಂಗ್ರೆಸ್ ಅಧಿಕಾರವಹಿಸಿಕೊಂಡ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದರು.ಈಗ ಅದನ್ನು ಪಾಲಿಸಲೇಬೇಕು ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ. ಐದು ಉಚಿತ ಗ್ಯಾರಂಟಿಗಳನ್ನು ಕೊಡಮಾಡಲಿದೆ. ದಯವಿಟ್ಟು ಕಾಂಗ್ರೆಸ್ನವರು ಹೇಳಿದ್ದನ್ನು ಜನರು ಫಾಲೋ ಮಾಡಬೇಕು.ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೊದಲ ಸಚಿವ ಸಂಪುಟ ಸಭೆಯೂ ಆಗಿರುವ ಕಾರಣ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ವತಃ ಹೇಳಿದಂತೆಯೇ ಯಾರೊಬ್ಬರೂ ಕರೆಂಟ್ ಬಿಲ್ ಕಟ್ಟಬೇಡಿ. ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲಿ. ನಾನು ಕಟ್ಟಲ್ಲ, ನೀವೂ ಕಟ್ಟಬೇಡಿ ಎಂದು ಅವರಿಬ್ಬರು ಹೇಳಿದ್ದಾರೆ. ಹೀಗಾಗಿ ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಅವಮಾನಿಸಬಾರದು ಎಂದು ರಾಜ್ಯದ ಜನರಿಗೆ ಆರ್.ಅಶೋಕ್ ಉಚಿತ ಸಲಹೆ ನೀಡಿದರು.


ಆರ್ಎಸ್ಎಸ್ ನಿಷೇಧವಲ್ಲ, ಸಂಘದ ಒಂದು ಶಾಖೆಯನ್ನು ಕಾಂಗ್ರೆಸ್ಗೆ ತಾಕತ್ತಿದ್ದರೆ ಮುಟ್ಟಲಿ ನೋಡೋಣ. ಹಿಂದುಗಳ ಧ್ವನಿಯಾಗಿರುವ ಆರ್ಎಸ್ಎಸ್, ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಪತನವಾಗಲಿದೆ ಎಂದು ಆರ್.ಅಶೋಕ್ ಎಚ್ಚರಿಸಿದರು.
ಐದು ಗ್ಯಾರಂಟಿಗಳನ್ನು ಈಡೇರಿಸಲು ಜನರು ಪಟ್ಟು ಹಿಡಿದು ಒತ್ತಡ ಹೇರಲಾರಂಭಿಸಿದ್ದು, ವಿಷಯಾಂತರ ಮಾಡಲು ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಮುತ್ತಾತ, ಅಜ್ಜಿಗೂ ಆರ್ಎಸ್ಎಸ್ ತಂಟೆಗೆ ಹೋಗಲಾಗಿಲ್ಲ. ನಿಷೇಧದ ಬಗ್ಗೆ ಸದನದಲ್ಲಿ ಧಮ್ಮಿದ್ದರೆ ಬಿಲ್ ತರಲಿ ಎಂದು ಸೆಡ್ಡು ಹೊಡೆದರು.
ಸಿದ್ದರಾಮಯ್ಯ ಅವರು 13 ಬಾರಿ ಬಜೆಟ್ ಮಂಡಿಸಿದವರು. ಉಚಿತ ಗ್ಯಾರಂಟಿ ಹೇಗೆ ಜಾರಿ ಮಾಡಬೇಕು, ಅವರಿಗೆ ಎಲ್ಲ ಮಾಹಿತಿಯಿದೆ, ಹೇಳಿದಂತೆ ನಡೆಯುತ್ತಾರೆ. ಡಬಲ್ ಸ್ಟೇರಿಂಗ್ ಸರ್ಕಾರದಲ್ಲಿ ಮಂತ್ರಿ ಪದವಿ, ಮಂತ್ರಿಯಾದವರಿಗೆ ಖಾತೆ ಗ್ಯಾರಂಟಿಯೇ ಸಿಕ್ಕಿಲ್ಲ ಎಂದು ಆರ್.ಅಶೋಕ್ ವ್ಯಂಗ್ಯವಾಡಿದರು.
Let Congress touch one office of the RSS if they have guts slams R. Ashok, says don't pay the electricity bill. Even am not going pay the bill he slammed.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm