ಬ್ರೇಕಿಂಗ್ ನ್ಯೂಸ್
26-05-23 01:28 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26 : ಚುನಾವಣೆಗೆ ಮುಂಚೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಂಟಿ ಸಹಿಯುಳ್ಳ ಗ್ಯಾರಂಟಿ ಕಾರ್ಡ್ಗಳನ್ನು ರಾಜ್ಯದ ಪ್ರತಿ ಮನೆಗೆ ವಿತರಿಸಿ, ಕಾಂಗ್ರೆಸ್ ಅಧಿಕಾರವಹಿಸಿಕೊಂಡ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದರು.ಈಗ ಅದನ್ನು ಪಾಲಿಸಲೇಬೇಕು ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ. ಐದು ಉಚಿತ ಗ್ಯಾರಂಟಿಗಳನ್ನು ಕೊಡಮಾಡಲಿದೆ. ದಯವಿಟ್ಟು ಕಾಂಗ್ರೆಸ್ನವರು ಹೇಳಿದ್ದನ್ನು ಜನರು ಫಾಲೋ ಮಾಡಬೇಕು.ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೊದಲ ಸಚಿವ ಸಂಪುಟ ಸಭೆಯೂ ಆಗಿರುವ ಕಾರಣ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ವತಃ ಹೇಳಿದಂತೆಯೇ ಯಾರೊಬ್ಬರೂ ಕರೆಂಟ್ ಬಿಲ್ ಕಟ್ಟಬೇಡಿ. ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲಿ. ನಾನು ಕಟ್ಟಲ್ಲ, ನೀವೂ ಕಟ್ಟಬೇಡಿ ಎಂದು ಅವರಿಬ್ಬರು ಹೇಳಿದ್ದಾರೆ. ಹೀಗಾಗಿ ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಅವಮಾನಿಸಬಾರದು ಎಂದು ರಾಜ್ಯದ ಜನರಿಗೆ ಆರ್.ಅಶೋಕ್ ಉಚಿತ ಸಲಹೆ ನೀಡಿದರು.


ಆರ್ಎಸ್ಎಸ್ ನಿಷೇಧವಲ್ಲ, ಸಂಘದ ಒಂದು ಶಾಖೆಯನ್ನು ಕಾಂಗ್ರೆಸ್ಗೆ ತಾಕತ್ತಿದ್ದರೆ ಮುಟ್ಟಲಿ ನೋಡೋಣ. ಹಿಂದುಗಳ ಧ್ವನಿಯಾಗಿರುವ ಆರ್ಎಸ್ಎಸ್, ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಪತನವಾಗಲಿದೆ ಎಂದು ಆರ್.ಅಶೋಕ್ ಎಚ್ಚರಿಸಿದರು.
ಐದು ಗ್ಯಾರಂಟಿಗಳನ್ನು ಈಡೇರಿಸಲು ಜನರು ಪಟ್ಟು ಹಿಡಿದು ಒತ್ತಡ ಹೇರಲಾರಂಭಿಸಿದ್ದು, ವಿಷಯಾಂತರ ಮಾಡಲು ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಮುತ್ತಾತ, ಅಜ್ಜಿಗೂ ಆರ್ಎಸ್ಎಸ್ ತಂಟೆಗೆ ಹೋಗಲಾಗಿಲ್ಲ. ನಿಷೇಧದ ಬಗ್ಗೆ ಸದನದಲ್ಲಿ ಧಮ್ಮಿದ್ದರೆ ಬಿಲ್ ತರಲಿ ಎಂದು ಸೆಡ್ಡು ಹೊಡೆದರು.
ಸಿದ್ದರಾಮಯ್ಯ ಅವರು 13 ಬಾರಿ ಬಜೆಟ್ ಮಂಡಿಸಿದವರು. ಉಚಿತ ಗ್ಯಾರಂಟಿ ಹೇಗೆ ಜಾರಿ ಮಾಡಬೇಕು, ಅವರಿಗೆ ಎಲ್ಲ ಮಾಹಿತಿಯಿದೆ, ಹೇಳಿದಂತೆ ನಡೆಯುತ್ತಾರೆ. ಡಬಲ್ ಸ್ಟೇರಿಂಗ್ ಸರ್ಕಾರದಲ್ಲಿ ಮಂತ್ರಿ ಪದವಿ, ಮಂತ್ರಿಯಾದವರಿಗೆ ಖಾತೆ ಗ್ಯಾರಂಟಿಯೇ ಸಿಕ್ಕಿಲ್ಲ ಎಂದು ಆರ್.ಅಶೋಕ್ ವ್ಯಂಗ್ಯವಾಡಿದರು.
Let Congress touch one office of the RSS if they have guts slams R. Ashok, says don't pay the electricity bill. Even am not going pay the bill he slammed.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm