ಬ್ರೇಕಿಂಗ್ ನ್ಯೂಸ್
26-05-23 04:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26 : ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಹಣಬಲದಿಂದ ಸೋಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ದಿನ ಬೆಳಗಿನ ಜಾವ ಕಾಂಗ್ರೆಸ್ ಅಭ್ಯರ್ಥಿ ಗಿಫ್ಟ್ ಕೂಪನ್ ಹಂಚಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿದು ಎರಡು ದಿನಗಳ ಬಳಿಕ ಇದು ನನಗೆ ಸಿಕ್ಕಿದೆ. ನಮ್ಮ ಕಡೆಯವರು ಬಂದು ಈ ರೀತಿ ಕೂಪನ್ ಹಂಚಿದ್ದು ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ರಾಮನಗರದಲ್ಲಿ ನಿಖಿಲ್ ಅವರನ್ನು ಸೋಲಿಸಿದ್ದಾರೆ ಅಂತಾರಲ್ಲ ಅವರನ್ನು ಸೋಲಿಸಿದ್ದು ಇದೇ ಎಂದು ಕೂಪನ್ಗಳನ್ನು ತೋರಿಸಿದರು.
ಇದೇ ಆ ಕೂಪನ್ ಗೆದ್ದಮೇಲೆ ಕೊಡ್ತೀವಿ ಎಂದು ಹೇಳಿದ್ದಾರೆ. ನ್ಯಾಯಯುತವಾಗಿ ಅವರು ನಮ್ಮನ್ನು ಸೋಲಿಸಿಲ್ಲ, 20-30 ಕೋಟಿ ರುಪಾಯಿ ಎಲ್ಲಿಂದ ತರ್ತೀರಾ ಇವರಿಗೆ ಕೊಡೋಕೆ, ಇದಕ್ಕೆಲ್ಲಾ ದುಡ್ಡು ಎಲ್ಲಿ ಬರುತ್ತೆ ಎಂದು ಕಿಡಿ ಕಾರಿದರು.

ಸಿದ್ದರಾಮಯ್ಯ ಇದಕ್ಕೆ ಉತ್ತರ ಕೊಡ್ತಾರ, ಸರ್ಕಾರದ ಗ್ಯಾರಂಟಿ ಕಾರ್ಯಕ್ರಮ ಬಿಡಿ ಇದಕ್ಕೆ ದುಡ್ಡು ಎಲ್ಲಿ ಬರುತ್ತೆ. ಕಮಿಷನ್ ದುಡ್ಡು ಹೊಡೆದ್ರೆ ಅಲ್ವಾ ಶಾಸಕರಿಗೆ ಹಣ ಬರೋದು, ಯೋಜನೆಗಳ ಹೆಸರಿನಲ್ಲು ಹಣ ಲೂಟಿ ಮಾಡೋಕೆ ನೀವು ಆದೇಶ ಕೊಡಬೇಕಲ್ವಾ ಈಗ, 40 ಪರ್ಸೆಂಟ್ ಮಾಡ್ತೀರೊ 80 ಪರ್ಸೆಂಟ್ ಮಾಡ್ತಿರೊ? ನಿಮ್ಮ ರಾಜೀವ್ ಗಾಂಧಿಯವರೇ ಹೇಳಿದ್ರಲ್ಲಾ, ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೊಟ್ಟರೆ 85 ಪರ್ಸೆಂಟ್ ಹಣ ದುರ್ಬಳಕೆ ಆಗ್ತದೆ ಎಂದು ಹೇಳಿದ್ದರು. ಅದನ್ನು ನೀವು ಕಾರ್ಯರೂಪಕ್ಕೆ ತರ್ತೀರಾ ಸಿದ್ದರಾಮಯ್ಯನರವೇ ಎಂದು ಪ್ರಶ್ನೆ ಮಾಡಿದರು.
ನಮ್ಮ ಪಕ್ಷವನ್ನು ವಿಸರ್ಜನೆ ಮಾಡಬೇಕು, ಅಂತ್ಯ ಸಂಸ್ಕಾರ ಮಾಡಬೇಕು ಅಂತೀರಾ ನಿಮಗೆ ಕೇರ್ ಮಾಡ್ತೀನಾ? ದೇವೇಗೌಡರು ಇನ್ನೂ ಬದುಕಿದ್ದಾರೆ, ನನ್ನ ಕಾರ್ಯಕರ್ತರು ಇನ್ನೂ ಬದುಕಿದ್ದಾರೆ. ಇದಕ್ಕಿಂತ ಕೆಟ್ಟ ಅನುಭವ ನಮ್ಮ ರಾಜಕೀಯ ಜೀವನದಲ್ಲಾಗಿದೆ, ಅವತ್ತೂ ಹೆದರಿಲ್ಲ, ಇವತ್ತೂ ಹೆದರಲ್ಲಿ ಹೋರಾಟಕ್ಕೆ ತಯಾರಾಗಿದ್ದೇವೆ ಎಂದು ಹೇಳಿದರು.
ಪಾರ್ಲಿಮೆಂಟ್ ಚುನಾವಣೆ ಬಳಿಕ ದೇಶದಲ್ಲಿ ಕಾಂಗ್ರೆಸ್ ಇರಬೇಕೊ ಬೇಡವೋ ಎನ್ನುವ ನಿರ್ಧಾರ ನೀವು ಮಾಡಬೇಕಾಗುತ್ತದೆ ಎಚ್ಚರಿಕೆಯಿಂದ ಇರಿ ಎಂದು ಖಡಕ್ಕಾಗಿಯೇ ಹೇಳಿದರು.
ರಾಮನಗರದಲ್ಲಿ ಕೂಪನ್ ಹಂಚಿಕೆ ವಿಚಾರವನ್ನು ಇಲ್ಲಿಗೇ ಬಿಡಲ್ಲ ಕಾನೂನು ಹೋರಾಟ ಮಾಡುತ್ತೇವೆ. ಸಿದ್ದರಾಮಯ್ಯನವರು ಈಗ ಹಲವಾರು ತನಿಖೆಗೆ ಆದೇಶ ಮಾಡ್ತಿದ್ದಾರೆ, ಕೂಪನ್ ಹಂಚಿದ ಚುನಾವಣೆ ಕರ್ಮಕಾಂಡದ ಬಗ್ಗೆ ತನಿಖೆ ನಡೆಸ್ತೀರಾ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.
My son Nikil lost because of Congress Money Power, Congress Coupon power has brought them victory slams Kumaraswamy.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm