ಬ್ರೇಕಿಂಗ್ ನ್ಯೂಸ್
28-05-23 05:42 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 28: ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿ ತರಲು ಕಾರಣರಾದವರು ಈಗ ಎಲ್ಲಿದ್ದಾರೆ. ಇನ್ನೂ ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಈಗ ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ಈ ಸ್ಥಿತಿಗೆ ತಂದವರು ಈಗ ಎಲ್ಲಿ ನಾಪತ್ತೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕನನ್ನೂ ಆರಿಸಲು ಯಾರಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಸೇರುವ ಮುನ್ನ ಯಾವುದೇ ಷರತ್ತು ಹಾಕದೆ ಹೋಗಿದ್ದೇನೆ. ಸಂಪುಟದಲ್ಲಿ ಸಚಿವನಾಗಿರಬೇಕು ಎನ್ನುವ ಜನರ ಬಯಕೆ ಈಡೇರಿಲ್ಲ. ಇನ್ನು ಹಲವು ಸ್ಥಾನಗಳಿದ್ದು, ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಶೆಟ್ಟರ ತಿಳಿಸಿದರು.
ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ. ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಆಗಿಲ್ಲ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ ಎಂದರು.

ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದು ಹೇಳಿದ ಅವರು, ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ. ಸೋಲಿಗೆ ಕಾರಣವಾದದ್ದು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕರೊಂದಿಗೆ ಈ ಕುರಿತು ಚರ್ಚೆ ಆಗಿಲ್ಲ ಎಂದರು.
Where are those leaders who have brought BJP to such a pathetic condition questions Jagadish Shettar. Addressing reporters in Hubballi on Sunday, Shettar stated that he had joined the Congress unconditionally and did not seek any ministerial position. However, the people expressed their desire for him to become a minister, but with only 34 available berths, it was not possible.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm