ಬ್ರೇಕಿಂಗ್ ನ್ಯೂಸ್
30-05-23 03:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕರೊನಾ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ವರದಿಯಲ್ಲಿ ಏನಿರುತ್ತದೆ ಎಂಬುದನ್ನು ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಕರೊನಾ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದು, ದುರದೃಷ್ಟವಶಾತ್ ಆಕ್ಸಿಜನ್ ದುರಂತಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಇನ್ನೂ ತನಿಖೆ ಪೂರ್ಣ ತನಿಖೆ ಮಾಡಿಲ್ಲ. ಇದೀಗ ಮರು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆಕ್ಸಿಜನ್ ದುರಂತ ಪ್ರಕರಣದಲ್ಲಿ ಯಾರಿಂದ ಲೋಪದೋಷ ಉಂಟಾಗಿದೆಯೋ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನ್ಯಾಯಾಲಯದಿಂದ ಪ್ರಕರಣದ ಕುರಿತು ತೀರ್ಪು ಬಂದಿದೆ. ಆದರೆ ಇಲಾಖೆಯಿಂದ ಸರಿಯಾದ ತನಿಖೆ ನಡೆದಿಲ್ಲ. ಮತ್ತೊಮ್ಮೆ ಸರಿಯಾದ ತನಿಖೆ ನಡೆಸುಂತೆ ಸೂಚಿಸಿದ್ದೇನೆ ಎಂದರು.
ಏನಿದು ಆಕ್ಸಿಜನ್ ದುರಂತ?
ಕರೊನಾ 2ನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಂಗ್ರಹದ ಅಸಮರ್ಪಕ ನಿರ್ವಹಣೆಯಿಂದ 36 ಕರೊನಾ ಸೋಂಕಿತರು ಮೃತಪಟ್ಟಿದ್ದರು. ಆಕ್ಸಿಜನ್ ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ನ್ಯಾಯಮೂರ್ತಿ ವೇಣುಗೋಪಾಲ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ ಈ ಹಿಂದಿನ ಸರ್ಕಾರ ಮಾತ್ರ ದುರಂತಕ್ಕೆ ಯಾರನ್ನೂ ಹೊಣೆ ಮಾಡಿರಲಿಲ್ಲ. ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ನ್ಯಾಯಾಂಗ ತನಿಖಾ ವರದಿ ಇನ್ನೂ ಬಹಿರಂಗವಾಗಿಲ್ಲ.
Oxygen tragedy in Chamarajanagar, health minister Dinesh Gundu Rao orders for reinvestigation of case.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm