ಬ್ರೇಕಿಂಗ್ ನ್ಯೂಸ್
30-05-23 10:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ನೀರಾವರಿ ಇಲಾಖೆಯ ಸಭೆಯನ್ನು ಕರೆದು ಮೇಕೆದಾಟು ಯೋಜನೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
ಚುನಾವಣೆಗೂ ಮುನ್ನ ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿ, ಈಗ ಮತ್ತೆ ಯೋಜನೆ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದಿದೆ. ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ಬೆಂಗಳೂರಿನ ನೀರಿನ ಬವಣೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡು ಯೋಜನೆ ವಿರುದ್ಧ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯುಎಂಎ) ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಈ ಯೋಜನೆಗೆ ರೂ. 9,000 ಕೋಟಿ (2019 ದರಗಳು) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. 'ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ' ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಕರ್ನಾಟಕಕ್ಕೆ ಹಂಚಿಕೆಯಾದ ಹೆಚ್ಚುವರಿ 4.75 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಈ ಯೋಜನೆ ಅವಕಾಶ ನೀಡಲಿದೆ.
67.16 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲು ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲಾಗುತ್ತದೆ. 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯುನಿಟ್ಗಳನ್ನು ನಿರ್ಮಿಸಬೇಕಿದೆ. ಇತರ ಮೂಲಸೌಕರ್ಯಗಳು, ನೀರನ್ನು ಎತ್ತುವ ಜಾಕ್ವೆಲ್- ಕಮ್- ಪಂಪ್ಹೌಸ್ಗಳ ನಿರ್ಮಾಣ ಯೋಜನೆಯ ಪ್ರಮುಖ ಅಂಶಗಳಾಗಿವೆ. ಯೋಜನೆಗೆ ಒಟ್ಟು 12,979 ಎಕರೆ ಭೂಮಿ ಅಗತ್ಯವಿದ್ದರೆ, ಇದರಲ್ಲಿ 12,345.4 ಎಕರೆ ಮುಳುಗಡೆಯಾಗಲಿದೆ. 500 ಎಕರೆ ಕಂದಾಯ ಭೂಮಿಯನ್ನು ಉಳಿಸಿಕೊಳ್ಳಲಾಗುತ್ತದೆ. ನೀರು ಪಾಲಾಗುವ ಉಳಿದ ಜಮೀನು ಪರಿಸರ ಸೂಕ್ಷ್ಮ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಸುತ್ತಮುತ್ತಲಿನ ಅರಣ್ಯಗಳಿಗೆ ಸೇರಿದೆ.
ವನ್ಯಜೀವಿಗಳ ಆವಾಸಸ್ಥಾನವು ಕುಗ್ಗುತ್ತಿರುವ ಸಮಯದಲ್ಲಿ ಸಂರಕ್ಷಿತ ಪ್ರದೇಶದ ದೊಡ್ಡ ಪ್ರದೇಶಗಳನ್ನು ಮುಳುಗಿಸುವುದು ವನ್ಯಜೀವಿ ಸಂಕುಲಕ್ಕೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ.
The Mekedatu project, one of the first issues the Congress raised to garner support for the elections, is back in the spotlight with Deputy Chief Minister D K Shivakumar, who holds the Water Resources portfolio, calling a meeting of the irrigation department on Tuesday.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm