ಬ್ರೇಕಿಂಗ್ ನ್ಯೂಸ್
01-06-23 04:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಪಿಎಸ್ಐ ನೇಮಕಾತಿ ಅಕ್ರಮದ ಸಂಪೂರ್ಣ ಮರು ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆಗಿರುವ ಪ್ರಕರಣದ ಸಂಪೂರ್ಣ ತನಿಖೆಗೆ ಸಜ್ಜಾಗಿರುವ ಸರ್ಕಾರ, ತನಿಖೆಗೆ ನೀಡಲಾಗಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ. ನ್ಯಾಯಯುತವಾಗಿ ಪರೀಕ್ಷೆ ಬರೆದು ತೇರ್ಗಡೆಯಾದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಮನವಿ ಸಲ್ಲಿಸುವ ವಿಚಾರವಾಗಿ ಈಗಾಗಲೇ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಜೊತೆ ಗೃಹಸಚಿವ ಡಾ. ಜಿ ಪರಮೇಶ್ವರ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮುಂದಿನ ಸೋಮವಾರ ಮತ್ತೊಮ್ಮೆ ಎಜಿ ಜೊತೆ ಪರಮೇಶ್ವರ್ ಮಾತುಕತೆ ನಡೆಸಲಿದ್ದಾರೆ. ತನಿಖೆಗೆ ತೊಡಕಿರುವ ಕಾನೂನಾತ್ಮಕ ವಿಚಾರಗಳ ಕುರಿತು ಮಾತುಕತೆ ನಡೆಯಲಿದೆ. ಎಜಿ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, ಪಿಎಸ್ಐ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಈ ಸಂಬಂಧ ತಾಂತ್ರಿಕ ಹಾಗೂ ಕಾನೂನಾತ್ಮಕ ಅಂಶಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರು ಚರ್ಚೆ ನಡೆಸಲಿದ್ದಾರೆ. ತನಿಖೆಯೊಂದಿಗೆ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ.
ಈಗಾಗಲೇ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಆಮೂಲಕ ಸಂಪೂರ್ಣ ಇಲಾಖೆಗೆ ಸರ್ಜರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
The Congress government in Karnataka has initiated a thorough re-investigation into the alleged irregularities in the recruitment of PSI during the tenure of the previous government. The government, which is gearing up for a thorough probe into the alleged irregularities in the recruitment of 545 PSI posts, is all set to approach the High Court seeking to vacate the stay on the probe. The government has assured that injustice will not be done to those who have cleared the exam in a fair manner.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm