ಬ್ರೇಕಿಂಗ್ ನ್ಯೂಸ್
03-06-23 02:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 3: ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಅಗತ್ಯ ನೆರವು ನೀಡಲು ಹಾಗೂ ಸುರಕ್ಷತೆಯ ಮಾಹಿತಿ ಒದಗಿಸಲು ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.
ದೂರವಾಣಿ ಸಂಖ್ಯೆ: 1070, 080-22253707, 080-22340676 ಕ್ಕೆ ಕರೆಮಾಡಿ ಮಾಹಿತಿ ಅಥವಾ ನೆರವು ಪಡೆಯಲು ಕೋರಲಾಗಿದೆ. ಶುಕ್ರವಾರ ರಾತ್ರಿ ಓಡಿಶಾದ ಬಾಲಸೋರ್ ರೈಲು ಅಪಘಾತ ಘಟನೆಯಲ್ಲಿ ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನೇತೃತ್ವದ ತಂಡವನ್ನು ನಿಯೋಜಿಸಿದೆ.
ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿಯವರಿಂದ ವರದಿಯನ್ನು ಕೇಳಿದ್ದು, ಕನ್ನಡಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರಿಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಡಿಶಾದ ಬಾಲಾಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಈ ಮೊದಲು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.
— Siddaramaiah (@siddaramaiah) June 3, 2023
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು…
Karnataka CM Siddaramaiah grieved by Odisha train accident, helpline number for kannadigas launched. He also tweeted stating we will be responsible to get back even a single kanmadiga safely from the place of accident in Odisha.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm