ಬ್ರೇಕಿಂಗ್ ನ್ಯೂಸ್
04-06-23 03:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
![]()

ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.
ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.
ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್ ಬಳಿ ಟಿಕೆಟ್ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.
Free bus travel for women in karnataka, women should carry ticket compulsory.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm