ಬ್ರೇಕಿಂಗ್ ನ್ಯೂಸ್
06-06-23 11:25 am HK News Desk ಕರ್ನಾಟಕ
ಯಾದಗಿರಿ, ಜೂನ್ 6: ಮಂಗಳವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಐದು ಜನ ಸಾವನ್ನಪ್ಪಿದ್ದು, 13 ಜನ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ.
ಮೃತರನ್ನು ರಮಿಜಾ ಬೇಗಂ (50), ಮುನೀರ್ (40), ನಯಾಮತ್ (40), ಮುದಸ್ಸೀರ್ (12) ಮತ್ತು ಸುಮ್ಮಿ (12) ಎಂದು ಗುರುತಿಸಲಾಗಿದೆ. ಮೃತರೆಲ್ಲಾ ಆಂಧ್ರ ಪ್ರದೇಶದ ಮೂಲದವರು ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ಮುನೀರ್ ಹಾಗೂ ಮುದಸ್ಸೀರ್ ಇಬ್ಬರೂ ತಂದೆ-ಮಗ ಎನ್ನಲಾಗಿದ್ದು, ಇನ್ನುಳಿದ ಮೂವರು ವೆಲಗುಡ ಗ್ರಾಮದವರು ಎಂದು ತಿಳಿದುಬಂದಿದೆ.
ಕ್ರೂಸರ್ನಲ್ಲಿದ್ದ ಜನರು ಆಂಧ್ರಪ್ರದೇಶದ ನಂದ್ಯಾಳ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಳಿಚಕ್ರ ಬಳಿ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೇ ಐವರು ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಸೈದಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಐವರು ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ರಸ್ತೆ ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಮತ್ತು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದೆ. ಮೇ 28ರಂದು ಕುಷ್ಟಗಿ ಸಮೀಪದ ಕಲಕೇರಿ ಬಳಿ ಭೀಕರ ರಸ್ತೆ ಅಪಘಾತ ನಡೆದಿತ್ತು. ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಮೇ 29ರಂದು ಮೈಸೂರಿನ ಟಿ ನರಸೀಪುರ ಸಮೀಪದ ಕುರುಬೂರು ಬಳಿ ಭೀಕರ ರಸ್ತೆ ಅಫಘಾತ ಸಂಭವಿಸಿತ್ತು. ಬಸ್ಗೆ ಕಾರು ಡಿಕ್ಕಿ ಹೊಡೆದು ಬಳ್ಳಾರಿ ಮೂಲದ 11 ಜನ ಸಾವನ್ನಪ್ಪಿದ್ದರು.
As many as five people, including two children, were killed in a road accident near Balichakra village in Yadgir district in Karnataka on June 6 morning. 13 others were injured in the accident and were rushed to YIMS.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm