ಬ್ರೇಕಿಂಗ್ ನ್ಯೂಸ್
06-06-23 04:29 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ರಾಜ್ಯ ಸರ್ಕಾರ ವಚನ ಭ್ರಷ್ಟ ಹಾಗೂ ಹಿಟ್ಲರ್ ಸರ್ಕಾರ ಆಗಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯನ್ನು ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಹೊಸ ಸರ್ಕಾರ, ಬಿಜೆಪಿ ಅವಧಿಯಲ್ಲಿ ಜಾರಿಯಲ್ಲಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮುಂದುವರಿಸಬೇಕು. ಎಲ್ಲರಿಗೂ ಉಚಿತವಾಗಿ 200 ಯೂನಿಟ್ ವಿದ್ಯುತ್ ಕೊಡಬೇಕು. ಮತ್ತು ಯಾವುದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ಯಾರಂಟಿಗಳ ಯೂಟರ್ನ್ ಹೊಡೆಯುತ್ತಿದೆ ಸರ್ಕಾರ ಎಂದು ಕಿಡಿಕಾರಿದರು. ಸಾವಿರ ಸುಳ್ಳು ಹೇಳಿ ಸರ್ಕಾರ ತಂದಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಇದೀಗ ಉತ್ತರ ಕೊಡಬೇಕಾಗಿದೆ. ಇನ್ನು ಮುಂದೆ ಗ್ಯಾರಂಟಿ ಅಂದರೆ ಸುಳ್ಳು ಎಂಬಂತಾಗಿದೆ ಎಂದು ಕಿಡಿಕಾರಿದರು.

ಪರಿಷತ್ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉಚಿತ ಎಂದು ಘೋಷಣೆ ಮಾಡಿದ್ದರು. ವೇದಿಕೆ ಮೇಲೆ ಇದ್ದ ಎಲ್ಲರಿಗೂ ಕರೆಂಟ್ ಉಚಿತ ಎಂದಿದ್ದರು. ಮೊದಲ ಕ್ಯಾಬಿನೆಟ್ ನಲ್ಲಿ ಈಡೇರಿಸುವ ಭರವಸೆ ಕೊಟ್ಟಿದ್ದರು. ಆದರೆ ನೂರೆಂಟು ಷರತ್ತುಗಳನ್ನು ಹಾಕಿದ್ದಾರೆ. ಇವಾಗ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದ್ದಾರೆ.
ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಕೊಡುವ ಮೂಲಕ ಮನೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಿರುದ್ಯೋಗಿಗಳಿಗೆ ಮೂರು ಸಾವಿರ ಕೊಡುತ್ತೇವೆ ಎಂದವರು ಇವಾಗ 2022-23 ಅವಧಿಗೆ ಎಂದು ಷರತ್ತು ಹಾಕಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣ ಸ್ವಾಮಿ, ಎನ್ ರವಿಕುಮಾರ್, ಕೇಶವ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
The Karnataka BJP on Tuesday staged a massive protest with cows in the city against Minister for Animal Husbandry and Veterinary Services K Venkatesh's 'anti-cow slaughter law' remark. Venkatesh had kicked up a storm by asking "If one can slaughter buffaloes and bulls, what is wrong with slaughtering cows?" BJP workers expressed their outrage at his statement of reconsidering the Anti-Cow Slaughter law, which prescribes stringent ...
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm