ಬ್ರೇಕಿಂಗ್ ನ್ಯೂಸ್
06-06-23 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.06: ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ವೇ ಕುಂಬಳಗೋಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾದಲ್ಲಿ ಮಳವಳ್ಳಿ ಕ್ಷೇತ್ರದ ಶಾಸಕ ನರೇಂದ್ರ ಸ್ವಾಮಿ ಅವರ ಕಾರನ್ನು ತಡೆದ ಟೋಲ್ ಸಿಬ್ಬಂದಿ, ನಿಮಗೆ ಹೈವೆಯಲ್ಲಿ ಹೋಗೋದಕ್ಕೆ ಬಿಟ್ಟಿಯಾಗಿ ಬಿಡ್ತೀವಿ. ನಾವು ಕಳಿಸಿದಾಗ ಹೋಗಬೇಕು, ಎಂದು ಅವಾಜ್ ಹಾಕಿದ್ದಾರೆ.
ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಮಾಡುವ ಶಾಸಕರು, ಸಚಿವರು, ಸಂಸದರು ಹಾಗೂ ಕೆಲವು ಜನಪ್ರತಿನಿಧಿಗಳಿಗೆ ಉಚಿತವಾಗಿ ಪ್ರಯಾಣ ಮಾಡುವ ಅವಕಾಶವಿದೆ. ಆದರೆ, ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರು ಬೆಂಗಳೂರಿನಿಂದ ಮಳವಳ್ಳಿಗೆ ಹೋಗುವಾಗ ಬೆಂಗಳೂರು ಹೊರವಲಯದ ಕುಂಬಳಗೋಡು ಬಳಿಯ ಕಣಮಿಣಿಕಿ ಟೋಲ್ ದಾಟಿ ಹೋಗುವ ಮುನ್ನ ಶಾಸಕರ ಪಾಸ್ ಕೂಡ ತೋರಿಸಲಾಗಿದೆ. ಆದರೂ, ನಿಮ್ಮನ್ನ ಬಿಟ್ಟಿಯಾಗಿ ಹೈವೇಯಲ್ಲಿ ಹೋಗೋಕೆ ಬಿಡ್ತೀವಿ ನಾವು ಅನುಮತಿ ಕೊಟ್ಟಾಗಲೇ ನೀವು ಟೋಲ್ ದಾಟಿ ಹೋಗಬೇಕು ಎಂದು ಶಾಸಕರಿಗೆ ಅವಾಜ್ ಹಾಕಿದ್ದಾನೆ.
ಪಾಸ್ ಇದ್ದರೂ ಶಾಸಕರ ಕಾರು ತಡೆದು ನಿಲ್ಲಿಸಿದ ಸಿಬ್ಬಂದಿ:
ಬೆಂಗಳೂರು- ದಶಪಥ ಹೆದ್ದಾರಿಯಲ್ಲಿ ಟೋಲ್ ಸಿಬ್ಬಂದಿಗಳ ಕಿರಿಕ್ ಹೆಚ್ಚಾಗುತ್ತಿದೆ. ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವೇಳೆ ಜನಸಾಮಾನ್ಯರ ಜೊತೆಗೆ ಮಾತ್ರವಲ್ಲದೇ ಈಗ ಶಾಸಕರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಜೊತೆ ಭಾನುವಾರ ಸಂಜೆ ಟೋಲ್ ಸಿಬ್ಬಂದಿ ಕ್ಯಾತೆ ತೆಗೆದು ಶಾಸಕರಿಗೇ ಅವಾಜ್ ಹಾಕಿದ್ದಾರೆ. ಬೆಂಗಳೂರಿನಿಂದ ಮಳವಳ್ಳಿ ಕಡೆ ಹೋಗ್ತಿದ್ದ ಶಾಸಕ ನರೇಂದ್ರ ಸ್ವಾಮಿಗೆ ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾ ಸಿಬ್ಬಂದಿ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಕಾರಿನಲ್ಲಿ ಶಾಸಕರ ವಾಹನ ಪಾಸ್ ಇದ್ರೂ, ತಡೆದು ನಿಲ್ಲಿಸಿದ್ದ ಟೋಲ್ ಸಿಬ್ಬಂದಿಗೆ ಶಾಸಕರು ಪ್ರಶ್ನೆ ಮಾಡಿದ್ದಾರೆ.
ನಾನು ನೋಡದ ಪೊಲೀಸಾ, ಯಾರು ಬರ್ತಾರೋ ಬರಲಿ:
ಈ ವೇಳೆ ಟೋಲ್ ಸಿಬ್ಬಂದಿ ಹಾಗೂ ಶಾಸಕರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ. ಪೋಲಿಸರು ಬರಲಿ ಎಂದ ಶಾಸಕ ನರೇಂದ್ರ ಸ್ವಾಮಿ ಹೇಳಿದ್ದಕ್ಕೆ ಯಾವ ಪೋಲಿಸರು ಬೇಕಾದರೆ ಬರಲಿ, ನಾನು ನೋಡಿರದ ಪೋಲಿಸಾ ಎಂದು ಏಕವಚನದಲ್ಲೇ ಟೋಲ್ ಸಿಬ್ಬಂದಿ ಶಾಸಕರಿಗೆ ಅವಾಜ್ ಹಾಕಿದ್ದಾರೆ. ನಿಮ್ಮನ್ನ ಹೈವೆಯಲ್ಲಿ ಬಿಟ್ಟಿ, ಫ್ರೀಯಾಗಿ ಬಿಡ್ತಾ ಇದ್ದೀವಿ ಎಂದು ನೀವೂ ಬಂದ್ವಾ ಹೋದ್ವಾ ಅನ್ನೋದನ್ನು ಕಲೀಬೇಕು ಎಂದು ಶಾಸಕರಿಗೆ ಏರು ಧ್ವನಿಯಲ್ಲೇ ಟೋಲ್ ಸಿಬ್ಬಂದಿ ಅವಾಜ್ ಹಾಕಿದ್ದಾನೆ. ಜೊತೆಗೆ, ಟೋಲ್ ಸಿಬ್ಬಂದಿ ಶಾಸಕರಿಗೆ ಕೈ ತೋರಿಸುತ್ತಾ ಶಾಸಕ ನರೇಂದ್ರ ಸ್ವಾಮಿ ಜೊತೆ ಅನುಚಿತ ವರ್ತನೆ ತೋರಿದ್ದಾನೆ.
Malavalli Congress MLA PM Narendra Swamy was reportedly ill-treated by a toll plaza employee on the Bengaluru-Mysuru expressway on Sunday. The incident took place when Narendra Swamy was travelling from Mysuru to Bengaluru.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am