ಬ್ರೇಕಿಂಗ್ ನ್ಯೂಸ್
08-06-23 09:12 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 8: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಾದ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಆತ್ಮಾವಲೋಕನ ಸಭೆ ನಡೆಸಿದ್ದು, ತಮ್ಮ ಸೋಲಿನ ಬಗ್ಗೆ ಸೋತ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಉಪಸ್ಥಿತರಿದ್ದರು. ಉಳಿದಂತೆ ಸಭೆಯಲ್ಲಿ ಗೆದ್ದ ಶಾಸಕರು, ಸೋತ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಸೋತ ಅಭ್ಯರ್ಥಿಗಳಲ್ಲಿ ಹೆಚ್ಚಿನವರಿಗೆ ನಾಯಕರು, ಸಚಿವರಾಗಿದ್ದವರ ಬಗ್ಗೆ ಅಸಮಾಧಾನಗಳಿದ್ದವು. ಹೀಗಾಗಿ ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಿಲ್ಲ.

ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಚುನಾವಣೆ ಉಸ್ತುವಾರಿ ವಹಿಸಿದ್ದ ರಾಜ್ಯ ನಾಯಕರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು. ನಾವು ಯಡಿಯೂರಪ್ಪ ನಂಬಿಕೊಂಡು ಪಕ್ಷಕ್ಕೆ ಬಂದಿದ್ದೆವು. ಆದರೆ ಇಲ್ಲಿ ನೋಡಿದರೆ, ಸ್ಥಿತಿ ಬೇರೆಯೇ ಇದೆ. ನಾನು ಕಾಂಗ್ರೆಸ್ ನಲ್ಲಿದ್ದಾಗ ಎರಡು ಬಾರಿ ಗೆದ್ದಿದ್ದೆ. ಬಿಜೆಪಿ ಬಂದ ಬಳಿಕ ಎರಡು ಬಾರಿ ಸೋತೆ. ಇದು ಯಾಕಾಯ್ತು ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಕೆಲವು ಸೋತ ಅಭ್ಯರ್ಥಿಗಳು ಮಾತನಾಡಿ, ಕಾರ್ಯಕರ್ತರನ್ನು ಕಡೆಗಣಿಸಿದ್ದೇ ಸೋಲಿಗೆ ಕಾರಣವಾಯ್ತು. ಅಧಿಕಾರದಲ್ಲಿದ್ದಾಗ ಕಾರ್ಯಕರ್ತನ ಕಡೆ ನೋಡಲೇ ಇಲ್ಲ. ಚುನಾವಣೆ ಬಂದಾಗ ಕಾರ್ಯಕರ್ತ ಬೇಕಾಯ್ತು. ನಾಯಕರ ಈ ರೀತಿಯ ಇಬ್ಬಂದಿತನ ಸೋಲಿಗೆ ಕಾರಣವಾಯ್ತು. ಸಚಿವರಾಗಿದ್ದವರು ಕೂಡ ಕಾರ್ಯಕರ್ತನ ಬೇಡಿಕೆಗೆ ಸ್ಪಂದಿಸಲಿಲ್ಲ ಎಂದು ನೋವು ಹೇಳಿಕೊಂಡರು. ಯಡಿಯೂರಪ್ಪ ಮಾತನಾಡಿ, ಸೋಲಾಯ್ತು ಎಂದು ಎದೆಗುಂದುವ ಅಗತ್ಯವಿಲ್ಲ. ನಾನು ಎರಡು ಸೀಟು ಇದ್ದಾಗ ಪಕ್ಷ ಕಟ್ಟಿದ್ದೇನೆ. ಇವತ್ತು ಅಧಿಕಾರ ಹಿಡಿಯುವಷ್ಟರ ಮಟ್ಟಿಗೆ ಪಕ್ಷ ಬೆಳೆದು ಬಂದಿದೆ. ಕಾರ್ಯಕರ್ತರ ಪಡೆಯೊಂದಿಗೆ ಮುನ್ನುಗ್ಗಬೇಕು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಬೇಕಿದೆ ಎಂದು ಕರೆ ನೀಡಿದರು.
ಮೇ 13ರಂದು ಫಲಿತಾಂಶ ಬಂದ ಬಳಿಕ ಬಿಜೆಪಿ ನಾಯಕರು ಹೀನಾಯ ಸೋಲಿನಿಂದ ಮೌನಕ್ಕೆ ಶರಣಾಗಿದ್ದರು. ಸೋಲಿನ ಬಗ್ಗೆ ಪರಾಮರ್ಶೆ ನಡೆಸುವುದಕ್ಕೂ ಹೋಗಿರಲಿಲ್ಲ. ಜೆಡಿಎಸ್ ನಾಯಕರು ಸೋಲಿನ ಬಗ್ಗೆ ಎರಡೆರಡು ಸಭೆ ನಡೆಸಿದ್ದಲ್ಲದೆ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೋಲಿನ ಹೊಣೆ ಹೊತ್ತು ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಬಿಜೆಪಿ ಕಾರ್ಯಕರ್ತರ ಕಡೆಯಿಂದ ಭಾರೀ ಟೀಕೆ ಕೇಳಿಸಿಕೊಂಡ ಬಳಿಕ ಒಂದು ತಿಂಗಳ ನಂತರ ಸಭೆ ನಡೆಸಿದ್ದು ಸೋಲಿನ ಬಗ್ಗೆ ಚಿಂತನೆ ನಡೆಸುವುದಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆಯೂ ಆಗಲಿದೆ ಎನ್ನಲಾಗುತ್ತಿದೆ. ಪ್ರತಿಪಕ್ಷ ನಾಯಕನ ಸ್ಥಾನ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ಇನ್ನೆರಡು ದಿನದಲ್ಲಿ ನೇಮಕ ಮಾಡುವ ಸಾಧ್ಯತೆಯಿದೆ.
Karnataka BJP party is holding a series of day-long meetings on Thursday to introspect the humiliating defeat in the recently concluded Assembly polls. Being held at the party headquarters here, the meeting will deliberate on the selection of candidates for the posts of leader of the Opposition in Assembly and council besides the party President from elected MLAs and leaders, according to sources.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am