ಬ್ರೇಕಿಂಗ್ ನ್ಯೂಸ್
09-06-23 07:11 pm HK News Desk ಕರ್ನಾಟಕ
ತುಮಕೂರು, ಜೂನ್ 9: ರಾಷ್ಟ್ರೀಯ ಹೆದ್ದಾರಿಯಲ್ಲಿ ಕುರು ಸಾಗಾಣಿಕೆ ಮಾಡುತ್ತಿದ್ದವರನ್ನು ಅಡ್ಡಗಟ್ಟಿ ಪೊಲೀಸರು ಹಣ ಪಡೆಯುತ್ತಿದ್ದ ಘಟನೆ ಬೆಳಕಿಗ ಬಂದಿದೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಮೇಲೆ ಲಂಚ ಪಡೆದ ಆರೋಪ ಮಾಡಲಾಗಿದೆ.
ಹೈವೇಗಳಲ್ಲಿ ಸಾಗುವ ಕಂಟೇನರ್ ಗಳನ್ನು ತಡೆದು ಲಂಚಕ್ಕಾಗಿ ಬೇಡಿಕೆ ಇಡುವ ದೃಶ್ಯಗಳನ್ನು ಸಾರ್ವಜನಿಕರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಪೊಲೀಸರು ಲಂಚ ಸ್ವೀಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಚಿದಾನಂದಸ್ವಾಮಿ, ಜೀಪ್ ಚಾಲಕ ಚಿಕ್ಕಹನುಮಯ್ಯ ಎನ್ನುವವರೇ ಹಣ ವಸೂಲಿ ಮಾಡುವಾಗ ಸಿಕ್ಕಿ ಬಿದ್ದಿರುವ ಪೊಲೀಸ್ ಅಧಿಕಾರಿಗಳಾಗಿದ್ದಾರೆ.

ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಈ ವಿಡಿಯೋ ಮಾಡಿದ್ದು, ಪೊಲೀಸರಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಆರಂಭದಲ್ಲಿ ಏನೂ ಆಗಿಲ್ಲ ಎನ್ನುವಂತೆ ಸುಮ್ಮನಿದ್ದ ಪೊಲೀಸರು, ನಂತರ ತಾವು ಪಡೆದಿದ್ದ ಹಣವನ್ನು ಲಾರಿ ಚಾಲಕನಿಗೆ ವಾಪಸ್ ಕೊಟ್ಟಿದ್ದಾರೆ.
ಎಪಿಎಂಸಿ ಮಾರುಕಟ್ಟೆಗಳನ್ನು ಕುರಿ, ಮೇಕೆಗಳನ್ನು ಖರೀದಿ ಮಾಡಿ, ಸಾಗಾಣೆ ಮಾಡುತ್ತಿರುವುದಕ್ಕೆ ಅಗತ್ಯವಾಗಿ ದಾಖಲೆಗಳು ಇದ್ದರೂ ಹಣ ಯಾಕೆ ವಸೂಲಿ ಮಾಡಿದ್ದೀರಾ ಎಂದು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು, ನಮ್ಮಿಂದ ತಪ್ಪಾಗಿದೆ ಬಿಟ್ಟುಬಿಡಿ ಅಣ್ಣಾ ಎಂದು ಕ್ಷಮೆ ಕೇಳಿದ್ದಾರೆ.
ಇಷ್ಟಕ್ಕೇ ಸುಮ್ಮನಾಗದ ಕಾರ್ಯಕರ್ತರು, ನೀವೂ ರೈತರ ಮಕ್ಕಳೇ ಅಲ್ಲವೇ, ದಿನವೆಲ್ಲಾ ಕಷ್ಟಪಟ್ಟು ದುಡಿದರೂ 200 ರುಪಾಯಿ ಸಿಗಲ್ಲ, ನೀವು ನೋಡಿದ್ರೆ ಈ ರೀತಿ ಸುಲಿಗೆ ಮಾಡ್ತೀದ್ದೀರಿ, ಈ ದುಡ್ಡಲ್ಲಿ ನಿಮ್ಮ ಮನೆಗೆ ತಿಂಡಿ ತೆಗೆದುಕೊಂಡು ಹೋಗ್ತೀರಿ, ಅವರು ನಿಮ್ಮ ಶ್ರಮದ ದುಡಿಮೆಯಲ್ಲಿ ತಿನ್ನುತ್ತಿದ್ದಾರ? ಇನ್ನಾದರೂ ಬದಲಾಗಿ ಎಂದು ಪೊಲೀಸರಿಗೆ ಬುದ್ದಿ ಹೇಳಿದ್ದಾರೆ.
ಈ ಹೆದ್ದಾರಿಯಲ್ಲಿ ಲಾರಿಗಳಿಂದ ಪೊಲೀಸರು 200-300 ರುಪಾಯಿ ಲಂಚ ಪಡೆಯುವುದು ಸಾಮಾನ್ಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರ ತವರು ಜಿಲ್ಲೆಯಲ್ಲೇ ಈ ರೀತಿ ಲಂಚಾವತಾರ ಇದ್ದರೆ ಬೇರೆ ಜಿಲ್ಲೆಗಳ ಗತಿಯೇನು ಎಂದು ಸಾರ್ವಜನಿರಕು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಬ್ಬರು ಪೊಲೀಸರು ಅಮಾನತು
ಇನ್ನು ಲಂಚ ಪಡೆದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಎಸ್ಐ ಮತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಎಸ್ಪಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
An Assistant Sub-Inspector and a jeep driver were suspended for allegedly extorting money from truck drivers on the National Highway 48 (NH-48) between Tumakuru and Sira on Friday. The action was taken after a few people questioned them when they were caught accepting bribes.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am