ಬ್ರೇಕಿಂಗ್ ನ್ಯೂಸ್
11-06-23 07:02 pm HK News Desk ಕರ್ನಾಟಕ
ಕೋಲಾರ, ಜೂನ್ 11: ಕಾಂಗ್ರೆಸ್ನ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರದಲ್ಲಿ ಕೆಜಿಎಫ್ ಶಾಸಕಿ ಎಂ ರೂಪಕಲಾ ಶಶಿಧರ್ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ಕೋಲಾರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ರೂಪಕಲಾ ಶಶಿಧರ್ ಅವರು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಮಹಿಳೆಯರು ಕುಳಿತಿದ್ದ ಬಸ್ ಚಲಾಯಿಸಿ ಗಮನ ಸೆಳೆದಿದ್ದಾರೆ. ರಾಬರ್ಟ್ಸನ್ ಪೇಟೆಯ ಕುವೆಂಪು ಬಸ್ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಓಡಿಸಿದರು. ಇದಕ್ಕೆ ಬಸ್ ಚಾಲಕ ನೆರವಾಗಿ, ಅವರಿಗೆ ಚಾಲನೆಯ ಸಲಹೆ ನೀಡಿದರು.
ಆರಂಭದಲ್ಲಿ ಗೇರ್ ಸರಿಯಾಗಿ ಬೀಳದೆ ಎರಡು ಬಾರಿ ಬಸ್ ಹಿಮ್ಮುಖವಾಗಿ ಚಲಿಸಿದ್ದು, ಹಿಂಭಾಗದಲ್ಲಿದ್ದ ಮತ್ತೊಂದು ಬಸ್ಗೆ ಡಿಕ್ಕಿಯಾಗುವುದು ತಪ್ಪಿದೆ. ಕೊಂಚ ದೂರ ಬಸ್ ಚಲಾಯಿಸಿದ ಬಳಿಕ ಶಾಸಕಿ ರೂಪಕಲಾ ಶಶಿಧರ್ ಅವರು ಮತ್ತೆ ಸ್ವಲ್ಪ ದೂರ ಬಸ್ನಲ್ಲಿ ಕುಳಿತು ಪ್ರಯಾಣಿಸಿದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಸ್ಫರ್ಧಿಸಿದ್ದರು. ಈ ಪೈಕಿ ಕೆ.ಎಚ್.ಮುನಿಯಪ್ಪ ಹಾಗೂ ಅವರ ಪುತ್ರಿ ರೂಪಾಕಲಾ ಶಶಿಧರ್ ಕೂಡ ಹೌದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದು ಕೆ.ಎಚ್.ಮುನಿಯಪ್ಪ ಅವರು ಗೆದ್ದು ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರೂ ಆಗಿದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ರೂಪಾಕಲಾ ಶಶಿಧರ್ ಕೂಡ ಜಯಭೇರಿ ಬಾರಿಸಿದ್ದರು.
ಮಹಿಳೆಯರಿಗೆ ಉಚಿತ ಪ್ರಯಾಣ: ಬಸ್ ಚಲಾಯಿಸಿದ ಕೆಜಿಎಫ್ ಶಾಸಕಿ ರೂಪಕಲಾ #kgf #shaktischeme #roopakala pic.twitter.com/DVzQQ5sLIM
— Prajavani (@prajavani) June 11, 2023
Chief Minister Siddaramaiah today (June 11, Sunday) launched the ambitious Shakti Yojana to provide free bus travel for women, which is one of the 5 guarantees of the Congress. Shakti Yojana was launched by KGF MLA Roopakala Shashidhar in Kolar.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm