ಬ್ರೇಕಿಂಗ್ ನ್ಯೂಸ್
12-06-23 11:45 am HK News Desk ಕರ್ನಾಟಕ
ರಾಮನಗರ, ಜೂನ್ 12: ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.


ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.

ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru Mysuru express way road accident, two friends killed on spot at Ramnagara.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am