ಬ್ರೇಕಿಂಗ್ ನ್ಯೂಸ್
14-06-23 01:26 pm HK News Desk ಕರ್ನಾಟಕ
ಮೈಸೂರು, ಜೂನ್ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿಯ ಕೆಲ ಮಹಾ ನಾಯಕರು ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ವಿರುದ್ಧ ಇದ್ದ ಅರ್ಕಾವತಿ ಡಿನೋಟಿಫಿಕೇಷನ್, ರೀಡೂ ಪ್ರಕರಣ ಹಾಗೂ ಕೆಂಪಣ್ಣ ಆಯೋಗದ ವರದಿ ಬಗ್ಗೆ ನಿರ್ಲಕ್ಷ್ಯ ತೋರಿದ್ದು. ಸಿದ್ದರಾಮಯ್ಯ ಅವರನ್ನ ಹೆದರಿಸುತ್ತಿದ್ದರೇ ಹೊರತು ಯಾವತ್ತು ಅದನ್ನ ತನಿಖೆಯಾಗಲು ಬಿಡಲಿಲ್ಲ. ಅದೇ ರೀತಿ ಈಗ ಸಿದ್ದರಾಮಯ್ಯ ಸಹ ಮಾಡುತ್ತಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ಸ್ವಪಕ್ಷೀಯರ ವಿರುದ್ಧವೇ ಕುಟುಕಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ 40 ಶೇಕಡಾ ಆರೋಪ, ಬಿಟ್ ಕಾಯಿನ್, ಪಿಎಸ್ ಐ ಹಗರಣದ ವಿರುದ್ಧ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಹೊರತು ಅಧಿಕಾರಕ್ಕೆ ಬಂದು ಇಷ್ಟು ದಿನ ಆದ್ರೂ ತನಿಖೆ ಬಗ್ಗೆ ಚಕಾರ ಎತ್ತುತ್ತಿಲ್ಲ. ಸಿದ್ದರಾಮಯ್ಯಗೆ ಬಿಜೆಪಿ ನಾಯಕರ ಜೊತೆ ಆ ರೀತಿ ಅಡ್ಜಸ್ಟಮೆಂಟ್ ಮಾಡ್ತಾ ಇಲ್ಲ ಅನ್ನೋದಾದ್ರೆ ಬಿಜೆಪಿ ನಾಯಕರ ವಿರುದ್ಧ ತನಿಖೆ ನಡೆಸಲಿ ಎಂದು ಸವಾಲೆಸೆದರು.
![]()
ಅಷ್ಟೇ ಅಲ್ಲ, ಕಾಂಗ್ರೆಸ್ ಜೊತೆಗೆ ಬಿಜೆಪಿ ನಾಯಕರು ಈ ರೀತಿ ಒಪ್ಪಂದ ಮಾಡಿಕೊಂಡಿದ್ದಾರೆ ಹೊರತು ಕಾರ್ಯಕರ್ತರಲ್ಲ. ನಾವು ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ವಿರುದ್ಧ ಹೋರಾಟ ನಡೆಸಿಯೇ ನಡೆಸುತ್ತೇವೆ ಎನ್ನುವ ಮೂಲಕ ಪಕ್ಷದ ನಾಯಕರು ಎನಿಸಿಕೊಂಡವರು ಮೌನ ವಹಿಸಿರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಸಂಸದ ಪ್ರತಾಪಸಿಂಹ ಈ ರೀತಿ ಆರೋಪ ಮಾಡಿದ್ರೂ ಎಲ್ಲಿಯೂ ಬಿಜೆಪಿ ನಾಯಕರ ಹೆಸರನ್ನ ಪ್ರಸ್ತಾಪ ಮಾಡಿಲ್ಲ.
ರಾಜ್ಯ ಬಿಜೆಪಿ ಈಗಾಗಲೇ ಒಡೆದ ಮನೆಯಾಗಿದ್ದು ನಾಯಕರು ಗುಂಪು ಕಟ್ಟಿಕೊಂಡಿದ್ದಾರೆ. ಈಗ ಮಹಾನ್ ನಾಯಕರು ಎನ್ನುವ ಪಕ್ಷದ ಮುಂಚೂಣಿ ವ್ಯಕ್ತಿಗಳ ವಿರುದ್ಧವೇ ಹೇಳಿಕೆ ನೀಡಿ ಹೊಸ ಸಂಚಲನ ಮೂಡಿಸಿದ್ದಾರೆ. ವಿಪಕ್ಷ ನಾಯಕ, ಹೊಸ ರಾಜ್ಯಾಧ್ಯಕ್ಷ ಹುಡುಕಾಟದಲ್ಲಿ ಕಾಲ ತಳ್ಳುತ್ತಿರುವ ರಾಜ್ಯ ಬಿಜೆಪಿಗೆ ಪ್ರತಾಪಸಿಂಹ ಮಾತು ಚಾಟಿಯಲ್ಲಿ ಬೀಸಿದಂತಾಗಿದೆ.
Mysuru MP Pratap Simha made serious allegations against a few leaders of his own party of “adjustment politics” with CM Siddaramaiah. “A few senior BJP leaders may not talk against Siddaramaiah, but BJP activists will never engage in such adjustment politics. Leaders may have lost elections, but activists will continue to fight,” he said.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am