ಬ್ರೇಕಿಂಗ್ ನ್ಯೂಸ್
15-06-23 04:38 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ತಿದ್ದುಪಡಿ- 2022 ಹೆಸರಲ್ಲಿ ಹಿಂದಿನ ಸರ್ಕಾರ ಕಾಯ್ದೆ ಜಾರಿಗೆ ತಂದಿತ್ತು. ಇದನ್ನು ರದ್ದು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್. ಕೆ ಪಾಟೀಲ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮತಾಂತರ ತಡೆಯುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೆ ಸದನದಲ್ಲಿ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ತಿಂಗಳಲ್ಲಿ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಿದೆ.
ಇದಲ್ಲದೆ, ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ನಿರ್ಧರಿಸಿದೆ. ಇದರಿಂದ ರೈತರು ಹಾಗೂ ಎಪಿಎಂಸಿ ಅವಲಂಬಿತರಿಗೆ ನಷ್ಟವಾಗಿದೆ. ಈ ಹಿನ್ನಲೆಯಲ್ಲಿ ಹಳೆ ಎಪಿಎಂಸಿ ಕಾಯ್ದೆಗೆ ಮಾರ್ಪಾಡುಗಳನ್ನು ಮಾಡಿ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.
ಇದೇ ಶೈಕ್ಷಣಿಕ ಸಾಲಿನಲ್ಲಿಯೇ ವಿವಾದಿತ ಪಠ್ಯಗಳನ್ನು ಕೈಬಿಟ್ಟು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 6 ರಿಂದ 10 ನೇ ತರಗತಿಯ ಕೆಲವು ಪಠ್ಯಗಳನ್ನು ಬದಲಾವಣೆ ಮಾಡಲು ಸಂಪುಟ ಸಭೆ ನಿರ್ಧರಿಸಿದೆ. ಪಠ್ಯದಲ್ಲಿ ನೆಹರು ಮತ್ತು ಅಂಬೇಡ್ಕರ್ ಕುರಿತ ಪಠ್ಯ ಸೇರ್ಪಡೆ, ಹೆಡ್ಗೆವಾರ್, ಸೂಲಿಬೆಲೆ, ಗೋಳ್ವಲ್ಕರ್ ಮತ್ತಿತರ ಬಿಜೆಪಿ ಅವಧಿಯಲ್ಲಿ ಸೇರಿಸಲಾಗಿದ್ದ ಪಠ್ಯವನ್ನು ಹಿಂತೆಗೆಯಲು ನಿರ್ಧರಿಸಿದೆ. ಇದಲ್ಲದೆ, ಶಾಲೆಗಳಲ್ಲಿ ರಾಷ್ಟ್ರಗೀತೆ, ನಾಡಗೀತೆ ಜತೆಗೆ ಸಂವಿಧಾನದ ಪೀಠಿಕೆಯನ್ನು ಕಡ್ಡಾಯ ಮಾಡಲಾಗಿದೆ.
The Karnataka cabinet on Thursday announced the decision to withdraw the anti-conversion law brought in by the previous BJP government in the state.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am