ಬ್ರೇಕಿಂಗ್ ನ್ಯೂಸ್
17-06-23 01:52 pm HK News Desk ಕರ್ನಾಟಕ
ಮೈಸೂರು, ಜೂ 17: ಯಡಿಯೂರಪ್ಪ ಪ್ರಯತ್ನದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು. ಅವರ ನಂತರ ಬಂದವರು ಮಾಡಿದ್ದೇನು ಎಂದು ಸಂಸದ ಪ್ರತಾಪ ಸಿಂಹ ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪ್ರವಾಹ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಒಬ್ಬರೇ ಪರಿಸ್ಥಿತಿ ನಿಭಾಯಿಸಿದರು. ಕೋವಿಡ್ ವೇಳೆ ಜನರ ಪ್ರಾಣ ಉಳಿಸಲು ಇಡೀ ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭಗಳಲ್ಲಿ ಯಡಿಯೂರಪ್ಪ ರಾಜ್ಯ ಕಾಪಾಡಿದ್ದಾರೆ. ಆದರೆ ಅವರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಎಂದು ಬೊಮ್ಮಾಯಿ ಹೆಸರೆತ್ತದೆ ಪ್ರಶ್ನಿಸಿದರು.

ಯಡಿಯೂರಪ್ಪ ನಂತರ ಬಂದವರು ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದುಕೊಳ್ಳಲಿಲ್ಲ. ಹಿಂದೂ ಮುಖಂಡರಾದ ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬ ಉತ್ಸಾಹ ಕಾಣಿಸಲಿಲ್ಲ ಎಂದ ಪ್ರತಾಪ್ ಸಿಂಹ ನಾನು ಜನರ ಆಕ್ರೋಶ, ಕಾರ್ಯಕರ್ತರ ನೋವಿಗೆ ಧ್ವನಿಯಾಗಿದ್ದೇನೆಯೇ ಹೊರತು ಬೇರೇನೂ ಅಲ್ಲ ಎಂದು ಸ್ಪಷ್ಟಪಡಿಸಿದರು.

ವಿಶ್ವದ ಶ್ರೇಷ್ಠ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ ಅವರೇ ಗ್ಯಾರಂಟಿಗೆ ಬೇಕಾದ 59 ಸಾವಿರ ಕೋಟಿ ಹಣ ಎಲ್ಲಿಂದ ತರುತ್ತೀರಾ? ನನ್ನನ್ನು ಎಳಸು ಎಂದರೂ ಬೇಸರವಿಲ್ಲ, ನನ್ನ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರೆ ಸಾಕು. ಹಣಕಾಸು ಬಗ್ಗೆ ತಿಳಿದ ನೀವು ಹೇಗೆ ಗ್ಯಾರಂಟಿ ಘೋಷಣೆ ಮಾಡಿದ್ರಿ? ನನ್ನನ್ನ ಚೈಲ್ಡ್ ಅಂತಾನೆ ಕರೆಯಿರಿ ಬೇಜಾರು ಇಲ್ಲ, ಆದರೆ ರಾಜ್ಯದಲ್ಲಿ ಸಂಪನ್ಮೂಲ ಕ್ರೋಡೀಕರಣ ಮಾಡುವುದು ಹೇಗೆ ತಿಳಿಸಿ?” ಎಂದು ಆಗ್ರಹಿಸಿದರು.

ಜಿ. ಪರಮೇಶ್ವರ್ರನ್ನು ಮುಗಿಸಿ ಸಿಎಂ ಆದರಲ್ಲ. ಆ ರೀತಿಯ ಪ್ರಬುದ್ಧತೆ ನನಗೆ ಬೇಕಿಲ್ಲ. ರಾಜಕೀಯ ಜೀವನದಲ್ಲಿ ಮುಂದೆ ಬರಲು ಸಹಕರಿಸಿದ ಹೆಚ್ ಡಿ ದೇವೇಗೌಡರನ್ನ ಅಗೌರವವಾಗಿ ಮಾತನಾಡುವುದು ನಿಮ್ಮ ಪ್ರಬುದ್ಧತೆ ಅನ್ನುವುದಾದರೆ ಅದು ನನಗೆ ಬೇಡ” ಎಂದು ಲೇವಡಿ ಮಾಡಿದ್ದಾರೆ.



ಅಕ್ಕಿ ಕೊಡುವ ಘೋಷಣೆ ಮಾಡುವ ಮುನ್ನ ಮೋದಿ ಅವರನ್ನು ಕೇಳಿದಿರಾ? ಕಾಂಗ್ರೆಸ್ ಅಧಿಕಾರಕ್ಕೆ ತರಲು ಡಿಕೆಶಿ ಪ್ರಮುಖ ಪಾತ್ರ ವಹಿಸಿದರು. ಆದರೆ ಈಗ ಡಿಕೆಶಿ ವಿರುದ್ಧ ಎಂ ಬಿ ಪಾಟೀಲ್ ರನ್ನು ಛೂ ಬಿಟ್ಟಿದ್ದೀರಿ. ಇದನ್ನೆಲ್ಲಾ ಮೆಚ್ಯೂರಿಟಿ ಎನ್ನುವುದಾದರೆ ಈ ರೀತಿಯ ಪ್ರಬುದ್ಧತೆ ನಿಮ್ಮಿಂದ ನನಗೆ ಬೇಡ” ಎಂದರು.
Mysuru BJP MP Pratap Simha indirectly slammed former Karnataka CM Basavaraj bommai for his governance. What measures did bommai take in the murder of Praveen nettaru or harsha murder in Shivamogga.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am