ಬ್ರೇಕಿಂಗ್ ನ್ಯೂಸ್
19-06-23 07:01 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 19: ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ಪೂರೈಕೆ ಮಾಡುವುದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಆರೋಪಕ್ಕೆ ಮಾಡಿತ್ತು. ಈ ಸಂಬಂಧ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ್ದು, ರಾಜ್ಯಗಳು ಕೇಳಿದಂತೆ ಪುಗಸಟ್ಟೆ ರೇಷನ್ ಕೊಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಆಗುವುದಿಲ್ಲ. ಎಫ್ಸಿಐಗೆ ರೇಷನ್ ಕೊಡುವ ಕುರಿತು ತನ್ನದೇ ಆದ ಮಾನದಂಡಗಳಿವೆ ಎಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ 140 ಕೋಟಿ ಜನರ ಭವಿಷ್ಯ ನೋಡಬೇಕಿದೆ. ನಿಮ್ಮ ಕುರ್ಚಿಗಾಗಿ, ನಿಮ್ಮ ತೆವಲಿಗಾಗಿ ಉಚಿತವಾಗಿ ಕೊಟ್ಟರೆ ಹೇಗೆ? ಇದು ನಿಮಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರ ಯಾವ ಕಾಲದಲ್ಲಿಯೂ ಉಚಿತವಾಗಿ ಯೋಜನೆ ನೀಡುತ್ತೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಬಗ್ಗೆ ಹಾಗೂ ಪ್ರಧಾನಿ ಮೋದಿ ಬಗ್ಗೆ ಮಾತನಾಡುವುದನ್ನು ಮೊದಲು ಕೈಬಿಡಬೇಕು. ಬದಲಾಗಿ ನೀವು ರಾಜ್ಯದ ಜನರಿಗೆ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಕೆಲಸ ಮಾಡಬೇಕು ಎಂದು ನಾರಾಯಣಸ್ವಾಮಿ ಹೇಳಿದರು.
ನಾನು ಒಬ್ಬ ಬಿಜೆಪಿ ಕಾರ್ಯಕರ್ತ ಎನ್ನುವುದಕ್ಕಿಂತ ದೇಶಭಕ್ತ, ನಮಗೆ ಎಲ್ಲ ಸಮಸ್ಯೆಗಳನ್ನು ಎದುರಿಸಿ ದೇಶ ಕಟ್ಟುವ ಶಕ್ತಿ ಇದೆ, ಕಟ್ಟಿ ತೋರಿಸುತ್ತೇವೆ ಎಂದರು. ಇನ್ನು ಬಿಜೆಪಿ ಸರ್ಕಾರ ಬ್ರಿಟೀಷ್ ಆಡಳಿತ ಎಂಬ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ,"ಮಧು ಬಂಗಾರಪ್ಪ ಅವರು ರಾಜಕೀಯದ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಯಬೇಕಿದೆ. ಮಾತನಾಡುವ ಮುನ್ನ ಹಿರಿಯರ ಮಾರ್ಗದರ್ಶನ ಪಡೆದು ಮಾತನಾಡಬೇಕು. ಇಲ್ಲವಾದರೆ ಈ ರಾಜಕೀಯ ವ್ಯವಸ್ಥೆಯಲ್ಲಿ ನೀವು ಮುಳುಗುತ್ತೀರಿ ಎಂದು ಟಾಂಗ್ ನೀಡಿದರು.
Minister Narayanaswamy slams Congress over Anna Bhagya scheme, says centre cannot provide it freely. BJP or Modi has never gauranteed of providing free rice.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm