ಬ್ರೇಕಿಂಗ್ ನ್ಯೂಸ್
20-06-23 04:00 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.20 : ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆಜಿಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ ಎಂದರು.
ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನರು ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ ಎಂದು ಹೇಳಿದರು.
ಬಿಎಸ್ ಯಡಿಯೂರಪ್ಪ ಅವರು ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ. ಅದನ್ನು ಬಿಟ್ಟು ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ ಎಂದು ಕಿಡಿಕಾರಿದರು.
No free rice, Karnataka capable of buying it from other States, will make Karnataka hungry free says D K Shivakumar. Several BJP leaders were detained while protesting against the Karnataka government over Anna Bhagya Scheme. Union Health Minister Mansukh Mandaviya chaired a high-level meeting in Delhi to review public health preparedness to deal with heatwave conditions.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am