ಬ್ರೇಕಿಂಗ್ ನ್ಯೂಸ್
20-06-23 05:16 pm HK News Desk ಕರ್ನಾಟಕ
ಧಾರವಾಡ, ಜೂ.20 : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಸತತ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೊಟ್ಟಿದ್ದ ಟಾಸ್ಕ್ನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತೀವ್ರ ಮುಖಭಂಗ ಎದುರಿಸಿದಂತಾಗಿದೆ.
ಬಿಜೆಪಿಯಿಂದ ವೀಣಾ ಭರದ್ವಾಡ್ ಮೇಯರ್ ಆಗಿ ಹಾಗೂ ಉಪ ಮೇಯರ್ ಆಗಿ ಸತೀಶ್ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ ತನ್ನ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದು, ಪಾಲಿಕೆಯಲ್ಲಿ ಅಧಿಕಾರ ರಚನೆ ಮಾಡಬೇಕು ಎಂಬ ಕಾಂಗ್ರೆಸ್ ಕನಸು ಕಮರಿದಂತಾಗಿದೆ. ಶತಾಯಗತಾಯ ಪಾಲಿಕೆಯಲ್ಲಿ ಅಧಿಕಾರ ರಚನೆ ಮಾಡಲು ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಸಂತೋಷ್ ಲಾಡ್ ಅವರು ಕಾರ್ಯತಂತ್ರ ರೂಪಿಸಿದ್ದರು. ಆದರೆ, ಅವರ ಕಾರ್ಯತಂತ್ರ ಕೊನೆಗೂ ಫಲಿಸಲಿಲ್ಲ.
ಕಾಂಗ್ರೆಸ್ ಪಕ್ಷ ಬಿಜೆಪಿ ಸದಸ್ಯರಿಗೆ ಆಸೆ, ಆಮಿಷಗಳನ್ನು ಒಡ್ಡಬಹುದು ಎಂದು ಬಿಜೆಪಿ ತನ್ನೆಲ್ಲಾ ಪಾಲಿಕೆ ಸದಸ್ಯರನ್ನು ದಾಂಡೇಲಿ ರೆಸಾರ್ಟ್ಗೆ ಶಿಫ್ಟ್ ಮಾಡಿತ್ತು. ಚುನಾವಣೆ ದಿನವೇ ಅವರನ್ನು ದಾಂಡೇಲಿಯಿಂದ ನೇರವಾಗಿ ಧಾರವಾಡದ ಮಂದಾರ ಹೋಟೆಲ್ಗೆ ಕರೆತಂದು ಅಲ್ಲಿಂದ ನೇರವಾಗಿ ಪಾಲಿಕೆಗೆ ಕರೆತಂದಿತು. ಬಿಜೆಪಿ ಪಕ್ಷದ ಸದಸ್ಯರು ಅಡ್ಡ ಮತದಾನ ಮಾಡದಂತೆ ಅವರಿಗೆ ವಿಪ್ ಕೂಡ ಜಾರಿ ಮಾಡಲಾಗಿತ್ತು. ಕಾಂಗ್ರೆಸ್, ಬಿಜೆಪಿ, ಎಂಐಎಂ ಹಾಗೂ ಪಕ್ಷೇತರ ಸದಸ್ಯರು ಕೂಡ ಸಭೆಗೆ ಹಾಜರಾಗಿದ್ದರು.
ಎಲ್ಲಾ ಸದಸ್ಯರು ಸಭೆಗೆ ಹಾಜರಾಗುತ್ತಿದ್ದಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಪ್ರಭಾರಿ ಆಯುಕ್ತ ನಿತೇಶ್ ಪಾಟೀಲ್ ಅವರು ಸಭೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. 46 ಜನ ಸದಸ್ಯರು ಬಿಜೆಪಿ ಅಭ್ಯರ್ಥಿಗಳ ಪರ ಮತ ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದರು. ಆ ಮೂಲಕ ಪೂರ್ಣ ಬಹುಮತ ಬಿಜೆಪಿ ಅಭ್ಯರ್ಥಿಗಳ ಪರವಾಗಿಯೇ ಬಂದಿದ್ದರಿಂದ ಆಯುಕ್ತರು ಬಿಜೆಪಿ ಅಭ್ಯರ್ಥಿಗಳನ್ನೇ ಮೇಯರ್ ಹಾಗೂ ಉಪಮೇಯರ್ ಎಂದು ಘೋಷಣೆ ಮಾಡಿದರು.
ಪಾಲಿಕೆಯ ಬಿಜೆಪಿ ಸದಸ್ಯರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಪ್ರದೀಪ್ ಶೆಟ್ಟರ್, ಎಸ್ವಿ ಸಂಕನೂರು ಕೂಡ ಆಗಮಿಸಿದ್ದರು. ಕಾಂಗ್ರೆಸ್ ಸದಸ್ಯರು ಕೂಡ ಪಾಲಿಕೆಗೆ ಬಂದು ಪೈಪೋಟಿ ನೀಡಿದರು. ಶಾಸಕ ಪ್ರಸಾದ್ ಅಬ್ಬಯ್ಯ ಕೂಡ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾವಣೆಗೆ ಆಗಮಿಸಿದ್ದರು.
ಕೊನೆಗೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಹೆಚ್ಚಿನ ಮತಗಳು ಬಂದಿದ್ದರಿಂದ 22ನೇ ಅವಧಿಗೆ ವೀಣಾ ಭರದ್ವಾಡ ಅವರು ಮೇಯರ್ ಹಾಗೂ ಹಾಗೂ ಸತೀಶ್ ಹಾನಗಲ್ ಅವರು ಉಪ ಮೇಯರ್ ಆಗಿ ಆಯ್ಕೆಯಾದರು.
BJP won the Hubballi-Dharwad Mayor and deputy Mayor elections held on Tuesday. BJP’s Veena Bharadwad was elected the Mayor and Satish Hangal was elected as Deputy Mayor.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 04:47 pm
Mangalore Correspondent
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm