ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 04:47 pm
Mangalore Correspondent
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm