ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm