ಬ್ರೇಕಿಂಗ್ ನ್ಯೂಸ್
23-06-23 06:18 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 23: ರಾಜ್ಯದಲ್ಲಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶವಿರುವ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರ ನಡುವಿನ ಸಂಬಂಧವೇ ಹದಗೆಟ್ಟು ಹೋಗಿದೆ. ಜನದಟ್ಟಣೆ, ಒತ್ತಡಗಳಿಂದ ಕಂಗೆಟ್ಟು ಹೋಗಿರುವ ಬಸ್ ಸಿಬ್ಬಂದಿ ತಾಳ್ಮೆಯನ್ನೇ ಕಳೆದುಕೊಳ್ಳುತ್ತಿದ್ದಾರೆ. ಜತೆಗೆ ಪ್ರಯಾಣಿಕರ ಜತೆ ಅಸೌಜನ್ಯದಿಂದ ವರ್ತಿಸುತ್ತಿದ್ದಾರೆ. ಪ್ರಯಾಣಿಕರು ಕೂಡಾ ತಮ್ಮ ಹಕ್ಕು ಸಾಧಿಸುವುದಕ್ಕಾಗಿ ಬಸ್ ಸಿಬ್ಬಂದಿ ಮೇಲೆ ಏರಿ ಹೋಗುತ್ತಿದ್ದಾರೆ.
ಇದೀಗ ಮಹಿಳಾ ಕಂಡಕ್ಟರ್ ಒಬ್ಬರು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆಗೆ ಕಪಾಳಮೋಕ್ಷ ಮಾಡಿದ್ದಾರೆ. ಕುಂದಗೋಳದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಬಸ್ನಲ್ಲಿ ಘಟನೆ ನಡೆದಿದ್ದು, ಮಾತಿಗೆ ಮಾತು ಬೆಳೆದು ಮಹಿಳಾ ಕಂಡಕ್ಟರ್ ವೃದ್ಧೆಗೆ ಹಲ್ಲೆ ನಡೆಸಿದ್ದಾರೆ. ಮಹಿಳಾ ಕಂಡಕ್ಟರ್ ವೃದ್ಧೆಗೆ ಕಪಾಳ ಮೋಕ್ಷ ಮಾಡಿದ್ದನ್ನು ಇತರ ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ವೃದ್ಧೆ ಮತ್ತು ಮಹಿಳಾ ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ವೃದ್ಧೆ ಬಸ್ ನಿರ್ವಾಹಕಿಯನ್ನು ನಿಂದಿಸಿದರು ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಬಸ್ ನಿರ್ವಾಹಕಿ ಮಹಿಳೆಯ ಕೆನ್ನೆಗೆ ಬಾರಿಸಿದ್ದಾರೆ.

ಆರಂಭದಲ್ಲಿ ಮಹಿಳಾ ಕಂಡಕ್ಟರ್ ಜಗಳವಾಡುವ ಅಜ್ಜಿಗೆ ʻಅಜ್ಜಿ ಮಾತಿಗೆ ಮಾತು ಬೆಳೆಸಿ ಜಗಳ ಮಾಡ್ಬೇಡʼ ಎಂದು ಎಚ್ಚರಿಕೆ ಕೊಡುತ್ತಾರೆ. ಬಳಿಕ ಅಜ್ಜಿ ಬೋಸುಡಿ ಎಂದು ಹೇಳಿದರೆಂದು ಕಂಡಕ್ಟರ್ ಹೇಳಿದ್ದಾರೆ.
ಆದರೆ, ಬಸ್ಸಿನಲ್ಲಿ ಅಷ್ಟೇನೂ ಪ್ರಯಾಣಿಕರಿರಲಿಲ್ಲ. ಒತ್ತಡದ ಸನ್ನಿವೇಶಗಳೂ ಇರಲಿಲ್ಲ. ಹಾಗಿದ್ದರೂ ಮಹಿಳಾ ಕಂಡಕ್ಟರ್ ನಿಯಂತ್ರಣ ಕಳೆದುಕೊಂಡಿದ್ದು ಸರಿಯಲ್ಲ ಎಂಬ ಮಾತೂ ಕೇಳಿಬರುತ್ತಿದೆ.
ಅಂತೂ ಮಹಿಳೆಯರ ಉಚಿತ ಪ್ರಯಾಣದ ಭರಾಟೆ ಒತ್ತಡವನ್ನು ಸೃಷ್ಟಿಸಿದ್ದಂತೂ ಸುಳ್ಳಲ್ಲ. ಈ ನಡುವೆ ರಸ್ತೆ ಸಾರಿಗೆ ನಿಗಮ ಏನೇ ಆದರೆ, ಪ್ರಯಾಣಿಕರ ಜತೆ ಸೌಜನ್ಯದಿಂದ ನಡೆದುಕೊಳ್ಳಬೇಕು. ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿಗೆ ಎಚ್ಚರಿಕೆ ನೀಡಿ ಕೆಲವೊಂದು ಸಲಹೆಗಳನ್ನೂ ಕೊಟ್ಟಿದೆ.
Women conductor slapped a elderly woman in #KSRTC bus heading from #Kundgol to #Hubballi on Friday. Co passenger's expressed anguish against conductor. @XpressBengaluru @Cloudnirad @ramupatil_TNIE @Amitsen_TNIE @pramodvaidya06 @raghukoppar pic.twitter.com/r2OOplD5az
— Mallikarjun Hiremath_TNIE (@HiremathTnie) June 23, 2023
A lady conductor allegedly slapped an old woman on a North Western Karnataka Road Transport Corporation (NWKRTC) bus in Karnataka’s Hubballi. According to officials, the incident occurred Friday morning.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am