ಬ್ರೇಕಿಂಗ್ ನ್ಯೂಸ್
24-06-23 03:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ನಾನು ರಾಮನಗರ ಜಿಲ್ಲಾ ಉಸ್ತುವಾರಿ ಆದಾಗ, ನಿನಗೂ ರಾಮನಗರಕ್ಕೂ ಏನು ಸಂಬಂಧ ಅಂತಾ ಡಿಕೆ ಶಿವಕುಮಾರ್ ಕೇಳಿದ್ರು. ಈಗ ನಾನು ಕೇಳ್ತೀನಿ, ನಿನಗೂ ಬೆಂಗಳೂರಿಗೂ ಏನಪ್ಪ ಸಂಬಂಧ ಶಿವಕುಮಾರ? ಎಂದು ಏಕವಚನದಲ್ಲಿಯೇ ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ಥ ನಾರಾಯಣ ಹಾಲಿ ಡಿಸಿಎಂ ಡಿಕೆ ಶಿವಕುಮಾರ್ಗೆ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ನನ್ನ ಪೂರ್ವಿಕರ ಜಿಲ್ಲೆ. ನನಗೆ ಕೇಳಿದ ಹಾಗೇ ನಿನಗೂ ಕೇಳ್ತಿದೀನಿ. ನಿನಗೂ ಬೆಂಗಳೂರಿಗೆ ಏನು ಸಂಬಂಧ ಶಿವಕುಮಾರ? ಬೆಂಗಳೂರಿಗೆ ನಿಮ್ಮಿಂದ ನಯಾಪೈಸೆ ಲಾಭ ಇಲ್ಲ. ನಿಮ್ಮನ್ನು ಜನ ಕಳೆದ 35 ವರ್ಷಗಳಿಂದ ನೋಡಿದ್ದಾರೆ. ಡಿಕೆ ಶಿವಕುಮಾರ್ ಅಂದ್ರೆ ಏನು, ಯಾರು ಎಂಬುದನ್ನು ಜನ ನೋಡಿದ್ದಾರೆ. ನಿಮ್ಮಿಂದ ಏನು ಆಗಲ್ಲ, ನಿಮಗೆ ಜನರ ಮೇಲೆ ಕಾಳಜಿ ಇಲ್ಲ ಎಂದು ಕಿಡಿಕಾರಿದರು.
![]()
ಡಿಕೆ ಶಿವಕುಮಾರ್ ರಿಯಲ್ ಎಸ್ಟೇಟ್ ವ್ಯಾಪಾರಿ, ಅವರಿಂದ ಬೆಂಗಳೂರಿಗೆ ಉಪಯೋಗ ಆಗಲ್ಲ. ಡಿಕೆ ಶಿವಕುಮಾರ್ ಅವರದ್ದು ದ್ವೇಷದ ರಾಜಕಾರಣ, ವೇಷದ ರಾಜಕಾರಣ. ಡಿಕೆ ಶಿವಕುಮಾರ್ ಅಂದ್ರೆ ದ್ವೇಷ, ಡಿಕೆ ಶಿವಕುಮಾರ್ ಅಂದ್ರೆ ಅಸೂಯೆ, ಕಿರುಕುಳ ಎಂದು ಡಾ ಸಿಎನ್ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬದ ಬಗ್ಗೆ ಮಾತನಾಡಿದ ಸಿಎನ್ ಅಶ್ವತ್ಥ ನಾರಾಯಣ, ಕಾಂಗ್ರೆಸ್ನವರು ಮಾತು ತಪ್ಪುತ್ತಿದ್ದಾರೆ. ಅವರು ನುಡಿದಂತೆ ಉಚಿತ ಗ್ಯಾರಂಟಿಗಳನ್ನು ಕೊಡಲಿ. ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಪ್ರತಿಯೊಬ್ಬರಿಗೂ ಕೊಡಬೇಕು. ಗ್ಯಾರಂಟಿಗಳನ್ನು ಕೊಡುವುದಕ್ಕೆ ಶುರು ಮಾಡಿ, ಬೇಕಾದವರು ಅರ್ಜಿ ಹಾಕೋತಾರೆ. ಈ ಸರ್ಕಾರಕ್ಕೆ ಗ್ಯಾರಂಟಿಗಳನ್ನು ಕೊಡೋಕ್ಕೆ ಇಷ್ಟ ಇಲ್ಲ. ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ ಇವರ ಪರಿಸ್ಥಿತಿ ಆಗಿದೆ ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಪಕ್ಷ ಯಾರನ್ನೇ ನೇಮಕ ಮಾಡಿದರೂ ನಾವು ಕೆಲಸ ಮಾಡ್ತೇವೆ. ಯಾರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ನಾವು ಒಪ್ಕೋತೇವೆ. ಸಾಕು ಈ ಜಾತಿ ವಿಚಾರ, ನಾವು ಕನ್ನಡಿಗರು, ಕರ್ನಾಟಕದವರು. ಪಕ್ಷದಲ್ಲಿ ಜವಾಬ್ದಾರಿ ನೀಡಿದರೆ ನಿಭಾಯಿಸುತ್ತೇನೆ. ಹಿಂದೆ ಡಿಸಿಎಂ ಸ್ಥಾನವನ್ನು ಬಯಸಿದ್ದಿಲ್ಲ, ನೀಡಿದರು ನಿಭಾಯಿಸಿದೆ ಎಂದು ಹೇಳಿದರು.
Ashwath Narayan slams DK Shivakumar in singular, says what is your connection with Bangalore, what good have you done. There is not a paisa benefit from him he added.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am