ಬ್ರೇಕಿಂಗ್ ನ್ಯೂಸ್
25-06-23 01:49 pm HK News Desk ಕರ್ನಾಟಕ
ಕಾರವಾರ, ಜೂನ್ 25: ಕಳ್ಳತನ ಪ್ರಕರಣದ ಆರೋಪದಡಿ ವಿಚಾರಣೆಗೆ ಕರೆ ತಂದಿದ್ದ ಕೈದಿಯೋರ್ವ ಪೊಲೀಸ್ ಠಾಣೆಯಲ್ಲಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಹೊನ್ನಾವರ ಪಟ್ಟಣದ ಸಾಲೆಹಿತ್ತಲ್ ಮನೆಯಲ್ಲಿ ಬಂಗಾರ ಕಳ್ಳತನ ಪ್ರಕರಣ ಪತ್ತೆ ಕಾರ್ಯದಲ್ಲಿರುವಾಗ ಚಿನ್ನಕ್ಕೆ ಹೊಳಪು ನೀಡುತ್ತೇವೆ ಎಂದು ಮೃತ ವ್ಯಕ್ತಿಯು ತಂದೆಯ ಜತೆ ಪಟ್ಟಣದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ ವಿಚಾರಣೆಗೆ ಕರೆತರಲಾಗಿತ್ತು. ವಿಚಾರಣೆಯ ಹಂತದಲ್ಲಿರುವಾಗ ಆರೋಪಿತ ನೀರು ಕುಡಿಯುತ್ತೇನೆ ಎಂದು ಬ್ಯಾಗ್ನಲ್ಲಿ ತಂದಿದ್ದ ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಐವರು ಪೊಲೀಸರು ಅಮಾನತು:
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ನಂತರ ಮಂಗಳೂರು ವಲಯದ ಐಜಿ ಚಂದ್ರಗುಪ್ತ ಸುದೀರ್ಘ ಎರಡು ಗಂಟೆಯ ವಿಚಾರಣೆಯ ಬಳಿಕ ಸಿಪಿಐ ಮಂಜುನಾಥ ಇ.ಒ, ಪಿಎಸ್ಐ ಮಂಜೇಶ್ವರ ಚಂದಾವರ, ಸಿಬ್ಬಂದಿಗಳಾದ ಸಂತೋಷ, ರಮೇಶ ಲಂಬಾಣಿ ಹಾಗೂ ಮಹಾವೀರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಮಾಜಿಸ್ಟೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಪ್ರಕರಣ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಇಂದು ಆಗಮಿಸುವ ಸಾಧ್ಯತೆ ಇದೆ. ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.
Five police personnel have been placed under suspension after a man allegedly committed suicide while in the custody of the Honnavar police. He committed suicide by consuming poison in the police station.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am