ಬ್ರೇಕಿಂಗ್ ನ್ಯೂಸ್
25-06-23 01:49 pm HK News Desk ಕರ್ನಾಟಕ
ಕಾರವಾರ, ಜೂನ್ 25: ಕಳ್ಳತನ ಪ್ರಕರಣದ ಆರೋಪದಡಿ ವಿಚಾರಣೆಗೆ ಕರೆ ತಂದಿದ್ದ ಕೈದಿಯೋರ್ವ ಪೊಲೀಸ್ ಠಾಣೆಯಲ್ಲಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಹೊನ್ನಾವರ ಪಟ್ಟಣದ ಸಾಲೆಹಿತ್ತಲ್ ಮನೆಯಲ್ಲಿ ಬಂಗಾರ ಕಳ್ಳತನ ಪ್ರಕರಣ ಪತ್ತೆ ಕಾರ್ಯದಲ್ಲಿರುವಾಗ ಚಿನ್ನಕ್ಕೆ ಹೊಳಪು ನೀಡುತ್ತೇವೆ ಎಂದು ಮೃತ ವ್ಯಕ್ತಿಯು ತಂದೆಯ ಜತೆ ಪಟ್ಟಣದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ ವಿಚಾರಣೆಗೆ ಕರೆತರಲಾಗಿತ್ತು. ವಿಚಾರಣೆಯ ಹಂತದಲ್ಲಿರುವಾಗ ಆರೋಪಿತ ನೀರು ಕುಡಿಯುತ್ತೇನೆ ಎಂದು ಬ್ಯಾಗ್ನಲ್ಲಿ ತಂದಿದ್ದ ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಐವರು ಪೊಲೀಸರು ಅಮಾನತು:
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ನಂತರ ಮಂಗಳೂರು ವಲಯದ ಐಜಿ ಚಂದ್ರಗುಪ್ತ ಸುದೀರ್ಘ ಎರಡು ಗಂಟೆಯ ವಿಚಾರಣೆಯ ಬಳಿಕ ಸಿಪಿಐ ಮಂಜುನಾಥ ಇ.ಒ, ಪಿಎಸ್ಐ ಮಂಜೇಶ್ವರ ಚಂದಾವರ, ಸಿಬ್ಬಂದಿಗಳಾದ ಸಂತೋಷ, ರಮೇಶ ಲಂಬಾಣಿ ಹಾಗೂ ಮಹಾವೀರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಮಾಜಿಸ್ಟೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಪ್ರಕರಣ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಇಂದು ಆಗಮಿಸುವ ಸಾಧ್ಯತೆ ಇದೆ. ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.
Five police personnel have been placed under suspension after a man allegedly committed suicide while in the custody of the Honnavar police. He committed suicide by consuming poison in the police station.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm