ಬ್ರೇಕಿಂಗ್ ನ್ಯೂಸ್
26-06-23 11:02 pm HK News Desk ಕರ್ನಾಟಕ
ಕೋಲಾರ, ಜೂನ್ 26: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕರ್ನಾಟಕ-ಆಂಧ್ರ ಗಡಿ ಭಾಗದ ರಾಕ್ ವ್ಯಾಲಿ ರೆಸಾರ್ಟ್ನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಭಾನುವಾರ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಮೂವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರು ಮಹಿಳೆಯನ್ನು ರಕ್ಷಿಸಲಾಗಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, 'ಈ ಮಹಿಳೆಯರನ್ನು ಹೈದರಾಬಾದ್ ಮೂಲದ ವಿಜಯ್ ಎಂಬಾತ ಆಂಧ್ರದ ವಿವಿಧೆಡೆಯಿಂದ ಕರೆತಂದು ರೆಸ್ಟೋರೆಂಟ್ ಮಾಲೀಕರೊಂದಿಗೆ ಸೇರಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ 14 ಜನರನ್ನು ವಶಕ್ಕೆ ಪಡೆದು ತನಿಖೆಗೊಳಪಡಿಸಿದೆವು. ರೆಸ್ಟೋರೆಂಟ್ ಮಾಲೀಕ, ಮ್ಯಾನೇಜರ್, ಸಪ್ಲೈಯರ್, ರಿಸೆಪ್ಷನಿಸ್ಟ್ ಹಾಗೂ ಮಹಿಳೆಯರನ್ನು ಕರೆತಂದಿದ್ದ ಏಜೆಂಟ್ ಸೇರಿದಂತೆ 7 ಮಂದಿ ವಿರುದ್ಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏಜೆಂಟ್ ವಿಜಯ್, ಮಂಜುನಾಥ್, ಆಂಜಪ್ಪ, ಸತೀಶ್ ಎಂಬುವರನ್ನು ಬಂಧಿಸಿದ್ದು, ರೆಸ್ಟೋರೆಂಟ್ ಮಾಲೀಕ ಚಂದ್ರಹಾಸ ಸೇರಿದಂತೆ ಮೂವರು ತಲೆಮರೆಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯ ವಶಕ್ಕೆ ಒಪ್ಪಿಸಲಾಗಿದೆ' ಎಂದರು.
ದಾಳಿ ವೇಳೆ 5,56,300 ನಗದು, ಸುಮಾರು 2 ಕೋಟಿ ಮೌಲ್ಯದ 10 ಐಷಾರಾಮಿ ಕಾರುಗಳು ಹಾಗೂ 14 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ಹೇಳಿದರು.
ಮಾನವ ಕಳ್ಳಸಾಗಣೆ ನಿಯಂತ್ರಣ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಲಾರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಭೈರ ನೇತೃತ್ವದಲ್ಲಿ ವಿಶೇಷ ತಂಡ ದಾಳಿ ನಡೆಸಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈರಾಕೂರು ಹೋಬಳಿ ಎಚ್.ಬೈಯಪ್ಪನಹಳ್ಳಿ ಗ್ರಾಮ ವ್ಯಾಪ್ತಿಯ ಸುಮಾರು ಏಳೆಂಟು ಎಕರೆ ಪ್ರದೇಶದಲ್ಲಿ ಈ ರೆಸಾರ್ಟ್ ಇದೆ. ಆವರಣದಲ್ಲಿರುವ ರಾಕ್ ವ್ಯಾಲಿ ಬಾರ್ ಅಂಡ್ ರೆಸ್ಟೋರೆಂಟ್ ಕಟ್ಟಡದ ಕೊಠಡಿಗಳಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ' ಎಂದು ತಿಳಿಸಿದರು.
ಇಲ್ಲಿ ವೇಶ್ಯಾವಾಟಿಕೆ ಜೊತೆಗೆ ಡ್ಯಾನ್ಸ್ ಹಾಗೂ ಮೋಜು ಮಸ್ತಿ ನಡೆಯುತಿತ್ತು. ವಿಜಯವಾಡ, ಚಿತ್ತೂರು, ವಿಶಾಖಪಟ್ಟಣದಿಂದ ಮಹಿಳೆಯರನ್ನು ಕರೆತರಲಾಗಿತ್ತು. ಇವರಲ್ಲಿ ರೆಸ್ಟೋರೆಂಟ್ ಮಾಲೀಕ ಚಂದ್ರಹಾಸ ಕಿಂಗ್ಪಿನ್. ಸತೀಶ್ ಎಂಬಾತ ಪಾರ್ಟಿ ಆಯೋಜಿಸಿದ್ದ. ಮಹಿಳೆಯರೆಲ್ಲಾ ಸುಮಾರು 20, 21, 24, 30 ವರ್ಷ ವಯಸ್ಸಿನವರು. ಅವರನ್ನು ಸಖಿ ಕೇಂದ್ರದಲ್ಲಿ ಇರಿಸಲಾಗಿದೆ.
Prostitution Racket Raid at Kolar by Police at Rock Valley Resort, six girls saved, four arrested, luxury cars worth cores seized by Police.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm