ಬ್ರೇಕಿಂಗ್ ನ್ಯೂಸ್
28-06-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ಕಾಂಗ್ರೆಸ್ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಪುನರ್ ತನಿಖೆ ಮಾಡಲಿದೆ ಎಂಬ ವರದಿಗಳ ನಡುವೆಯೇ, ಕಾಂಗ್ರೆಸ್ ರಾಜ್ಯ ಘಟಕ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದೆ. ಬಿಟ್ ಕಾಯಿನ್ ಹಗರಣದ ತನಿಖೆ ಮಾಡಲಾಗುತ್ತೆ ಎನ್ನುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಕಟಕಿಯಾಡಿದೆ.
ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಾಗ ಅಂದಿನ ಬಿಜೆಪಿ ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಸರ್ವ ಪ್ರಯತ್ನ ಮಾಡಿತ್ತು. ಹಗರಣ ಮುಚ್ಚಿ ಹಾಕಲು ಯಶಸ್ವಿಯೂ ಆಗಿತ್ತು. ಈಗ ನಮ್ಮ ಸರ್ಕಾರ ಬಿಟ್ ಕಾಯಿನ್ ಹಗರಣದ ಬುಡ, ಬೇರುಗಳನ್ನು ಜಾಲಾಡಲಿದೆ. ಅಂದಹಾಗೆ, ನಳಿನ್ ಕಟೀಲ್ ಅವರು ಕುಳಿತಲ್ಲಿಯೇ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಪ್ರಶ್ನೆ ಮಾಡಿದೆ.

ಹಗರಣದಲ್ಲಿ ನಳಿನ್ ಕುಮಾರ್ ಕಟೀಲ್ ಶಾಮೀಲಾತಿ ಇದೆಯೆಂದು ಈ ಹಿಂದೆ ಕಾಂಗ್ರೆಸ್ ರಾಜ್ಯ ವಕ್ತಾರ ಕೆ.ಲಕ್ಷ್ಮಣ್ ಆರೋಪ ಮಾಡಿದ್ದರು. ಎರಡು ವರ್ಷಗಳ ಹಿಂದೆ ಪ್ರಕರಣದ ತನಿಖೆ ಹಳ್ಳ ಹಿಡಿದಾಗ ಈ ಪ್ರಶ್ನೆ ಮಾಡಿದ್ದರು. ಆದರೆ ತನಿಖೆಯನ್ನು ಸಿಐಡಿ ತಂಡ ಅರ್ಧಕ್ಕೆ ಸ್ಥಗಿತಗೊಳಿಸಿತ್ತು. ಪ್ರಕರಣದ ಬಗ್ಗೆ ಚಾರ್ಜ್ ಶೀಟನ್ನೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರಲಿಲ್ಲ. ಆನಂತರ, ಚುನಾವಣೆ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಬಿಟ್ ಕಾಯಿನ್ ಹಗರಣವನ್ನು ತನಿಖೆ ಮಾಡುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದರು. ಇದೀಗ ಹಿಂದಿನ ಸರ್ಕಾರದ ಎಲ್ಲ ಹಗರಣಗಳನ್ನೂ ತನಿಖೆ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮರು ತನಿಖೆಗೆ ಬೆಂಗಳೂರು ಕಮಿಷನರ್ ಡಿಜಿಪಿಗೆ ಪತ್ರ ಬರೆದಿದ್ದು ಸಿಐಡಿ ಅಥವಾ ಎಸ್ಐಟಿ ತಂಡದಿಂದ ತನಿಖೆ ನಡೆಯೋದು ಖಾತ್ರಿಯಾಗಿದೆ.
Re investigation of Bitcoin scam, Nalin Kateel is sweating, mocks Congress on Twitter. The Congress government in Karnataka on Tuesday said it will get the Bitcoin scam taken place during the previous BJP government thoroughly investigated
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am