ಬ್ರೇಕಿಂಗ್ ನ್ಯೂಸ್
30-06-23 06:43 pm HK News Desk ಕರ್ನಾಟಕ
ಗದಗ, ಜೂನ್ 30: ಆದರ್ಶ ದಂಪತಿಯಾಗಿ ಬಾಳಿದವರು ಸಾವಿನಲ್ಲೂ ಒಂದಾಗುವುದನ್ನು ಕೇಳಿದ್ದೇವೆ. ಇಲ್ಲೊಬ್ಬ ಹಿರಿಯ ರೈತನ ಸಾವಿನ ಬೆನ್ನಲ್ಲೇ ಆತನ ಎತ್ತು ಕೂಡ ಸಾವು ಕಂಡಿದ್ದು ಅಪರೂಪದ ಘಟನೆ ನಡೆದಿದೆ.
ಗದಗ ತಾಲ್ಲೂಕಿನ ಬೆನಕನಕೊಪ್ಪದಲ್ಲಿ ಘಟನೆ ನಡೆದಿದೆ. ಭೀಮಪ್ಪ ಕಣಗಿನಹಾಳ (90) ಎಂಬ ಹಿರಿಯ ಜೀವ, ರೈತ ನಿನ್ನೆಯಷ್ಟೇ ಸಾವು ಕಂಡಿದ್ದರು. ಭೀಮಪ್ಪ ಸಾವಿನ ಬಳಿಕ ಅಂತ್ಯಸಂಸ್ಕಾರಕ್ಕೆ ರೆಡಿ ಮಾಡುತ್ತಿದ್ದಾಗಲೇ ರೈತನ ಜೊತೆಗೆ ಬಹುಕಾಲ ಇದ್ದ ಎತ್ತು ಕೂಡ ಕೊನೆಯುಸಿರೆಳೆದಿದೆ.

ಕೃಷಿ ಕಾರ್ಯದಲ್ಲಿ ಜೊತೆಗೂಡಿದ್ದ ಎತ್ತು ರೈತನ ಸಾವಿನಲ್ಲೂ ಜೊತೆಯಾಗಿದೆ. ಮಾಲೀಕನ ಸಾವಿನ ಬೆನ್ನಲ್ಲೇ ಎತ್ತು ಕೂಡ ಸಾವನ್ನಪ್ಪಿದ್ದನ್ನ ಕಂಡು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಎತ್ತು - ರೈತನ ಅಪರೂಪದ ನಂಟು ಕಂಡು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ.

ಭೀಮಪ್ಪ ಅವರ ಜಮೀನಿನಲ್ಲೇ ರೈತ ಮತ್ತು ಎತ್ತುವನ್ನು ಅಕ್ಕ-ಪಕ್ಕದಲ್ಲೇ ಇಟ್ಟು ಸಮಾಧಿ ಮಾಡಲಾಗಿದೆ. ಲಿಂಗಾಯತ ವಿಧಿ ವಿಧಾನದಂತೆ ರೈತ ಭೀಮಪ್ಪ ಮತ್ತು ಆತನ ಎತ್ತಿನ ಅಂತ್ಯಸಂಸ್ಕಾರ ಮಾಡಲಾಗಿದೆ. ಅಂತ್ಯಸಂಸ್ಕಾರಲ್ಲಿ ಬೆನಕನಕೊಪ್ಪ ಆಸುಪಾಸಿನ ಗ್ರಾಮಸ್ಥರು ಭಾಗಿಯಾಗಿದ್ದಾರೆ.
Gadag, OX dies soon after its owner dies. Ox died soon aafter its owner Famer Beemapa (90) passed away. Both were cremated in the same place with honours.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am