ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm