ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am